Home ರಾಜ್ಯ ಪ್ರಜ್ವಲ್ ಪ್ರಕರಣ | ನ್ಯಾಯಾಲಯ ತನ್ನ ಕೆಲಸ ಮಾಡಿದೆ. ಆ ಕುರಿತು ಪ್ರತಿಕ್ರಿಯಿಸುವುದಿಲ್ಲ: ನಿಖಿಲ್ ಕುಮಾರಸ್ವಾಮಿ

ಪ್ರಜ್ವಲ್ ಪ್ರಕರಣ | ನ್ಯಾಯಾಲಯ ತನ್ನ ಕೆಲಸ ಮಾಡಿದೆ. ಆ ಕುರಿತು ಪ್ರತಿಕ್ರಿಯಿಸುವುದಿಲ್ಲ: ನಿಖಿಲ್ ಕುಮಾರಸ್ವಾಮಿ

0

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ತೀರ್ಪಿಗೆ ಪ್ರತಿಕ್ರಿಯಿಸಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನ್ಯಾಯಾಲಯದ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಅದನ್ನು ವಿಶ್ಲೇಷಿಸುವ ಅಥವಾ ವಿಮರ್ಶಿಸುವ ಅಗತ್ಯವಿಲ್ಲ ಎಂದು ಹೇಳಿದರು.

“ನ್ಯಾಯಾಲಯ ತನ್ನ ತೀರ್ಪು ನೀಡಿದೆ. ಅತ್ಯಾಚಾರದ ಆರೋಪಗಳು ಕೇಳಿಬಂದಾಗಲೇ ಜೆಡಿಎಸ್ ನಾಯಕತ್ವವು ಪ್ರಜ್ವಲ್‌ರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು. ಈ ವಿಷಯದ ಬಗ್ಗೆ ನಾನು ಹೆಚ್ಚು ಹೇಳಲು ಸಾಧ್ಯವಿಲ್ಲ” ಎಂದು ನಿಖಿಲ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಹಾಸನ ಜಿಲ್ಲೆಯ ಫಾರ್ಮ್‌ಹೌಸ್‌ನಲ್ಲಿ ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ, ಶನಿವಾರದಂದು ಸಂಸದರು/ಶಾಸಕರ ವಿಶೇಷ ನ್ಯಾಯಾಲಯ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

You cannot copy content of this page

Exit mobile version