Home ಬ್ರೇಕಿಂಗ್ ಸುದ್ದಿ ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಕುರಿತು ಅವಹೇಳನಕಾರಿ ಬರಹ: ಪತ್ರಕರ್ತ ವಿಶ್ವೇಶ್ವರ ಭಟ್ ಮೇಲೆ ಕ್ರಿಮಿನಲ್...

ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಕುರಿತು ಅವಹೇಳನಕಾರಿ ಬರಹ: ಪತ್ರಕರ್ತ ವಿಶ್ವೇಶ್ವರ ಭಟ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು

0

ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಕುರಿತು ಹೇಳನಕಾರಿ ಬರಹ: ಪತ್ರಕರ್ತ ವಿಶ್ವೇಶ್ವರ ಮೇಲಿನ ಭಟ್ಕಳದ ಕ್ರಿಮಿನಲ್ ಪ್ರಕರಣ ದಾಖಲು ವಿಶ್ವವಾಣಿ ಎಂಬ ಕನ್ನಡ ದಿನಪತ್ರಿಕೆಯೊಂದರ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಮೇಲೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೇಸ್ ಕಾನೂನು ವಿಭಾಗದ ಅಧ್ಯಕ್ಷ ವಕೀಲ ಮಂಜುನಾಥ ನಾಯಕ ಎಂಬುವವರು ವಿಶ್ವೇಶ್ವರ ಭಟ್ ವಿರುದ್ಧ ದೂರು ದಾಖಲಿಸಿದ್ದಾರೆ.

ವಿಶ್ವೇಶ್ವರ ಭಟ್‌ ಅಗಸ್ಟ್‌ 20 ರಂದು ಮಾಡಿದ್ದ ಫೇಸ್ಬುಕ್‌ ಪೋಸ್ಟ್‌ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಬ್ಯಾನರ್ಜಿಯವರ ಬಗ್ಗೆ ಅವಹೇಳನಕಾರಿ ಹಾಗೂ ಅಸಹ್ಯಕಾರಿ ಪೋಸ್ಟ್‌ ಮಾಡಿರುವ ಹಿನ್ನಲೆಯಲ್ಲಿ ಈ ಕೇಸ್‌ ದಾಖಲಾಗಿದೆ.

ಆರೋಪಿ ವಿಶ್ವೇಶ್ವರ ಭಟ್ Your clothes should be tight enough to show you are a teenage girl but loose enough to show you are a lady ಎಂಬ ಹಾಲಿವುಡ್‌ ನಟಿ ಮರ್ಲಿನ್‌ ಮೆನ್ರೋ ಮಾತುಗಳನ್ನು ಉಲ್ಲೇಖಿಸಿ “ಹೆಣ್ಣು ಮಕ್ಕಳು ಯಾವ ಡ್ರೆಸ್ಸನ್ನೂ ಬಹಳ ದಿನಗಳ ಕಾಲ ಇಷ್ಟಪಡುವುದಿಲ್ಲ. ಅಂದರೆ ಟೈಟ್ ಡ್ರೆಸ್ಸನ್ನು ಯಾವತ್ತೂ ಧರಿಸುವುದಿಲ್ಲ. ಆಗೊಮ್ಮೆ ಈಗೋಮ್ಮೆ ಧರಿಸಿದಾಗ ಮನೆಯಲ್ಲಿ ಸದನ ಸದೃಶ ವಾತಾವರಣ ನಿರ್ಮಿಸಬಾರದು, ಕೆಲ ದಿನಗಳ ಬಳಕ ಮಗಳಿಗೆ ನೀವು ಅಂಥ ಡ್ರೆಸ್ ಧರಿಸು ಅಂದರೂ ಧರಿಸುವುದಿಲ್ಲ. ಅಷ್ಟಕ್ಕೂ ಆ ವಯಸ್ಸಿನ ಮಕ್ಕಳು ಟೈಟ್ ಡ್ರೆಸ್ ಧರಿಸಿದರೇ ಚೆಂದ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಬ್ಯಾನರ್ಜಿ ಅಂಥ ಡ್ರೆಸ್ ಧರಿಸಿದರೆ ಬರಿಗಣ್ಣಿನಿಂದ ನೋಡಲು ಸಾಧ್ಯವಾ ? ಒಮ್ಮೆ ಯೋಚಿಸಿ” ಎಂದು ಬರೆದುಕೊಂಡಿದ್ದಾನೆ.

ಈತ ತನ್ನ ಬರಹದಲ್ಲಿ ಮಹಿಳೆಯರ ಬಗ್ಗೆ, ದೇಹದ ಬಗ್ಗೆ, ಉಡುಗೆಯ ಹಾಗೂ ಅವರ ಘನತೆಗೆ ಕುಂದಾಗುವಂತೆ ಅವಹೇಳನಕಾರಿಯಾಗಿ ಬರೆದಿದ್ದು ಇದರಿಂದ ಸಮಾಜಕ್ಕೆ ತಪ್ಪು ಸಂದೇಶವನ್ನು ಹರಡಿದ್ದು, ವಿಶ್ವೇಶ್ವರ ಭಟ್ಟ ಇವರ ಮೇಲೆ ಕಾನೂನು ಕ್ರಮ ಜರುಗಿಸಲು ದೂರಿನಲ್ಲಿ ಆಗ್ರಹಿಸಲಾಗಿದೆ.

ಐಪಿಸಿ ಸೆಕ್ಷನ್‌ 505 (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆ ನೀಡುವುದು), 509
(ಮಹಿಳೆಯರ ಘನತೆಯನ್ನು ಅವಮಾನಿಸುವುದು), 504
(ಶಾಂತಿ ಕದಡಲು ಉದ್ದೇಶಪೂರ್ವಕ ಅವಮಾನಿಸುವುದು) ಅಡಿಯಲ್ಲಿ ಕೇಸು ದಾಖಲಾಗಿದೆ.

ಕನ್ನಡ ದಿನಪತ್ರಿಕೆಯೊಂದರ ಪ್ರಧಾನ ಸಂಪಾದಕನಾದ ಈ ವ್ಯಕ್ತಿ ಈ ಹಿಂದೆಯೂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಪತ್ರಿಕೆಗಳಲ್ಲಿ ಬರೆದುಕೊಳ್ಳುವ ಅಭ್ಯಾಸವನ್ನು ಮಾಡಿಕೊಂಡಿದ್ದ ಮಾಡಿಕೊಂಡಿದ್ದು ಅನೇಕ ಬಾರಿ ಟೀಕೆಗೆ ಒಳಗಾಗಿದ್ದಾನೆ. ತನ್ನ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ನಾಯಕರನ್ನು ಆಹ್ವಾನಿಸಿದ ಸಂದರ್ಭದಲ್ಲಿ ಈತನ ವಿಕೃತಿಯ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು.

You cannot copy content of this page

Exit mobile version