Monday, June 24, 2024

ಸತ್ಯ | ನ್ಯಾಯ |ಧರ್ಮ

ಸನಾತನ ಧರ್ಮದ ಕುರಿತು ಟೀಕೆ: ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿ ವಜಾ

ಚನೈ: ಸನಾತನ ಧರ್ಮದ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗಳಿಗೆ ಒಳಗಾಗಿದ್ದ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಮದ್ರಾಸ್ ಹೈಕೋರ್ಟ್‌ ಎರಡು ದಿನಗಳವರೆಗೆ ತರಾಟೆಗೆ ತೆಗೆದುಕೊಂಡು ಇಂದು ಬುಧವಾರ ಅರ್ಜಿಯನ್ನು ವಜಾಗೊಳಿಸುವ ಮೂಲಕ ಅವರಿಗೆ ಸಣ್ಣ ರಿಲೀಫ್ ನೀಡಿದೆ.


ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು ವಜಾಗೊಳಿಸಿದೆ.ಆದರೆ, ‘ಸ್ಟಾಲಿನ್ ಅವರ ಹೇಳಿಕೆಗಳನ್ನು ತಪ್ಪು’ ಎಂದು ಗಮನಿಸಿದ ಹೈಕೋರ್ಟ್ ಅವರಿಗೆ ಛೀಮಾರಿ ಹಾಕಿದೆ.


ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರಾಗಿರುವ 46 ವರ್ಷದ ಡಿಎಂಕೆ ನಾಯಕ, ಕಳೆದ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಬಲಪಂಥೀಯರು ಮತ್ತು ಹಿಂದುತ್ವವಾದಿಗಳು ವಿವಾದ ಮಾಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ, ಅದನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು’ ಎಂಬ ಅವರು ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಉದಯನಿಧಿ ಸ್ಟಾಲಿನ್ ಅಲ್ಲದೆ, ಅರ್ಜಿದಾರರು ರಾಜ್ಯ ಸಚಿವ ಪಿಕೆ ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ ರಾಜಾ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದರು. ಉದಯನಿಧಿ ಹೇಳಿಕೆ ನೀಡಿದಾಗ ಬಾಬು ಉಪಸ್ಥಿತರಿದ್ದರು. ರಾಜಾ ಅವರು ಉದಯ್ ಹೇಳಿದ್ದನ್ನು ಅನುಮೋದಿಸಿದ್ದರು. ಈ ಕಾರಣಕ್ಕಾಗಿ ಇವರಿಬ್ಬರ ಮೇಲೂ ಕ್ರಮ ತೆಗೆದುಕೊಳ್ಳಲು ಆಗ್ರಹಿಸಿದ್ದರು.
ಅವರ ಹೇಳಿಕೆಯನ್ನು ಬೆಂಬಲಿಸಿದ್ದ ರಾಜಾ, ‘ಸ್ಟಾಲಿನ್ ಅವರು ಜಾತಿ ಆಧಾರಿತ ತಾರತಮ್ಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮವನ್ನು ಅಲ್ಲ. ಅವರು ಕಾನೂನು ಕ್ರಮ ಎದುರಿಸಲು ಸಿದ್ಧ; ಆದರೆ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ ಎಂದಿದ್ದರು.


ಅವರ ಹೇಳಿಕೆಯ ಮೇಲಿನ ಗಲಾಟೆ ನಂತರ ದೇಶದ ಹಲವಾರು ರಾಜ್ಯಗಳಲ್ಲಿ ಪೊಲೀಸ್ ದೂರುಗಳು ದಾಖಲಾಗಿದ್ದವು. ಹಲವು ಎಫ್‌ಐಆರ್‌ಗಳನ್ನು ಒಟ್ಟಿಗೆ ಸೇರಿಸಿ ವಿಚಾರಣೆ ನಡೆಸಬೇಕೆಂದು ಉದಯ್‌ ಸ್ಟಾಲಿನ್ ಈಗ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು.
ಇದಕ್ಕೆ ಸುಪ್ರೀಂ ಕೋರ್ಟ್ ಕಟುವಾಗಿ ಪ್ರತಿಕ್ರಿಯಿಸಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠವು ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಸಚಿವರಾಗಿ ನೀವು ತಮ್ಮ ಮಾತಿನ ಪರಿಣಾಮಗಳ ಬಗ್ಗೆ ತಿಳಿದಿರಬೇಕಿತ್ತು. ನೀವು ಹೇಳಿದ್ದರ ಪರಿಣಾಮ ಏನು ಗೊತ್ತಾ? ನೀವು ಜನಸಾಮಾನ್ಯರಲ್ಲ, ಮಂತ್ರಿಯಾಗಿದ್ದೀರಿ ಅನ್ನುವುದು ನೆನಪಿನಲ್ಲಿರಲಿ ಎಂದು ಸೋಮವಾರ ಎಂದು ಬುದ್ಧಿವಾದ ಹೇಳಿತ್ತು.

Related Articles

ಇತ್ತೀಚಿನ ಸುದ್ದಿಗಳು