Sunday, June 22, 2025

ಸತ್ಯ | ನ್ಯಾಯ |ಧರ್ಮ

ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಸಿ ಟಿ ರವಿ ಚಕ್ಕರ್?

ಬೆಂಗಳೂರು: ಯಡಿಯೂರಪ್ಪನವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ 15ರಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದ, ಇದರ ಸಲುವಾಗಿ ಅವರು ಸಿ ಟಿ ರವಿಯವರನ್ನು ಭೇಟಿಯಾದರು. ಆದರೆ ಸಿ ಟಿ ಪಕ್ಷದ ಪ್ರಚಾರ ಕಾರ್ಯಕ್ರಮ ನೆಪ ಹೇಳಿ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.

ಭೇಟಿಯಲ್ಲಿ ನವೆಂಬರ್ 15ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಹಾಜರಾಗುವಂತೆ ವಿಜಯೇಂದ್ರ ರವಿ ಅವರಿಗೆ ಆಹ್ವಾನ ನೀಡಿದರು. ಆದರೆ ಪೂರ್ವ ನಿಗದಿತ ಕಾರ್ಯಕ್ರಮದ ಕಾರಣ ತಾನು ಅಂದು ಹಾಜರಿರಲು ಸಾಧ್ಯವಿಲ್ಲ ಎಂದು ರವಿ ತಿಳಿಸಿದ್ದಾರೆ. ಅವರು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಧ್ಯಪ್ರದೇಶದಲ್ಲಿ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಜಯೇಂದ್ರ ಅವರು ಬುಧವಾರ ರಾಜ್ಯಾಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಹಲವು ಹಿರಿಯ ನಾಯಕರಿಗೆ ಆಹ್ವಾನ ನೀಡಿದ್ದಾರೆ. ರಾಜ್ಯ ಬಿಜೆಪಿ ನವೆಂಬರ್ 23-30ರ ನಡುವೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ದೊಡ್ಡ ಸಭೆಯೊಂದನ್ನು ಯೋಜಿಸಿದೆ.

ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದಾಗಿನಿಂದ ರವಿ ಅವರು ಈ ನಿರ್ಧಾರದ ವಿರುದ್ಧ ಬಹಿರಂಗವಾಗಿಯೇ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡದಿದ್ದರೂ ಪಕ್ಷದ ಪರ ಪ್ರಚಾರ ಮುಂದುವರಿಸುತ್ತೇನೆ. ನಾನು ಬೇರೆ ಪಕ್ಷ ಸೇರುವ ಬಗ್ಗೆ ಯೋಚಿಸಿಲ್ಲ. ರಾಜಕೀಯದಿಂದ ಬೇಸತ್ತರೆ ಮನೆಯಲ್ಲಿ ಕೂರುತ್ತೇನೆ ಆದರೆ ಬೇರೆ ಪಕ್ಷ ಸೇರುವುದಿಲ್ಲ ಎಂದು ರವಿ ಸೋಮವಾರ ಹೇಳಿದ್ದಾರೆ.

ಈ ವರ್ಷ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ ಹಂಚಿಕೆ ವಿಚಾರವಾಗಿ ರವಿ ಮತ್ತು ವಿಜಯೇಂದ್ರ ನಡುವೆ ಮಾತಿನ ಚಕಮಕಿ ನಡೆದಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page