Friday, June 20, 2025

ಸತ್ಯ | ನ್ಯಾಯ |ಧರ್ಮ

ಡಿ ವೈ ಚಂದ್ರಚೂಡ್‌ ವಿರುದ್ದ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ನ್ಯಾ. ಡಿ ವೈ ಚಂದ್ರಚೂಡ್‌ ಅವರನ್ನು ಸುಪ್ರೀಂ ಕೋರ್ಟಿನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ ವಜಾಗೊಳಿಸಿದೆ 

ನ್ಯಾಯವಾದಿ ಮುರ್ಸಲಿನ್ ಅಸಿಜಿತ್ ಶೇಖ್ ಅವರು ಸಲ್ಲಿಸಿದ ಮನವಿಯಲ್ಲಿ, “ನ್ಯಾ. ಚಂದ್ರಚೂಡ್ ಅವರು ಹನ್ನೆರಡು ಸಂದರ್ಭಗಳಲ್ಲಿ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ತಳೆದಿದ್ದು ಸುಪ್ರೀಂ ಕೋರ್ಟ್‌ನ ವಿಸ್ತೃತ ಪೀಠಗಳು ಈ ಹಿಂದೆ ನೀಡಿದ್ದ ತೀರ್ಪುಗಳನ್ನ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿ ಅರ್ಹ ದಾವೆದಾರರಿಗೆ ನ್ಯಾಯ  ನಿರಾಕರಿಸಿದ್ದಾರೆ” ಎಂದು ಆರೋಪಿಸಿದ್ದರು.

ನ್ಯಾಯಮೂರ್ತಿ ಚಂದ್ರಚೂಡ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಮತ್ತಿತರ ಕ್ರಿಮಿನಲ್ ಕ್ರಮಗಳನ್ನು ಜರುಗಿಸಬೇಕು. ಜೊತೆಗೆ, ಅವರನ್ನು ಸಿಜೆಐ ಆಗಿ ನೇಮಕ ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ವಿನಂತಿಸಿದ್ದರು.

ಈ ಹಿನ್ನಲೆಯಲ್ಲಿ ಆದೇಶ ನೀಡಿದ ಸುಪ್ರೀಂಕೋರ್ಟ್‌ ʼನ್ಯಾಯಮೂರ್ತಿಗಳು ನೀಡಿದ ಆದೇಶಗಳು ಅವರ ನೇಮಕಾತಿ ಪ್ರಶ್ನಿಸಲು ಆಧಾರವಾಗದುʼ ಎಂದು ಸ್ಪಷ್ಟಪಡಿಸಿದೆ. “ನೀವಿಲ್ಲಿ ಇಂತಹ ಅಂಶಗಳನ್ನು ವಾದಿಸುವಂತಿಲ್ಲ” ಎಂದು ನ್ಯಾ. ಭಟ್‌ ತಿಳಿಸಿದರು. “ಅರ್ಜಿಯನ್ನು ಪರಿಗಣಿಸಬೇಕು ಎನ್ನುವುದಕ್ಕೆ ನಮಗೆ ಯಾವುದೇ ಕಾರಣ ದೊರೆಯುತ್ತಿಲ್ಲ. ಇಡೀ ಮನವಿ ಸಂಪೂರ್ಣ ತಪ್ಪು ಗ್ರಹಿಕೆಯಿಂದ ಕೂಡಿದೆ. ಹೀಗಾಗಿ ವಜಾಗೊಳಿಸಲಾಗುತ್ತಿದೆ” ಸಿಜೆಐ ಯು ಯು ಲಲಿತ್, ನ್ಯಾಯಮೂರ್ತಿಗಳಾದ ಎಸ್ ರವೀಂದ್ರ ಭಟ್ ಹಾಗೂ ಬೇಲಾ ಎಂ ತ್ರಿವೇದಿ ಅವರಿದ್ದ ಪೀಠ ಹೇಳಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page