Saturday, June 15, 2024

ಸತ್ಯ | ನ್ಯಾಯ |ಧರ್ಮ

ದೈವ ನರ್ತಕರಿಗೆ ಪ್ರತಿ ತಿಂಗಳು 2000ರೂ ಮಾಸಾಶನ : ರಾಜ್ಯ ಸರ್ಕಾರ

ಬೆಂಗಳೂರು : 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ತಿಂಗಳು 2000ರೂ. ಮಾಸಾಶನ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರ ನಿರ್ಧರಿಸಿದೆ.

ದೈವನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ತಿಂಗಳು 2000 ರೂ. ಮಾಸಾಶನ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೊಮ್ಮಾಯಿ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ, ʼ60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು 2000 ರೂ. ಮಾಸಾಶನ ನೀಡಲು ಬೊಮ್ಮಾಯಿ ಸರ್ಕಾರ ನಿರ್ಧರಿಸಿದೆ. ಈ ಮೂಲಕ ನಮ್ಮ ಸಂಸ್ಕೃತಿ ಆಚರಣೆ ಹಾಗೂ ಧಾರ್ಮಿಕ ಹಿರಿಮೆಯನ್ನು ಸಾರುವ ದೈವ ನರ್ತಕರ ಬದುಕಿನಲ್ಲಿ ಭರವಸೆ ಮೂಡಿಸಿದೆʼ ಎಂದು ಹೇಳಿದೆ.

ತುಳು ನಾಡು ಸಂಸ್ಕೃತಿ, ಅಲ್ಲಿನ ಭೂತಾರಾದನೆ ಆಧಾರಿತ ʼಕಾಂತಾರʼಇತ್ತೀಚೆಗೆ ಬಿಡುಗಡೆಯಾಗಿ ಬಾರೀ ಸದ್ದು ಮಾಡುತ್ತಿದ್ದುಈ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಮಾಡಿರುವುದು ಕಾಂತಾರ ಸಿನೆಮಾದ ಪರಿಣಾಮ  ಸರ್ಕಾರ ಮೇಲೂ ಬಿದ್ದಿದೆಯಾ ಅನ್ನುವುದು ಅಭಿಮಾನಿಗಳ ಕುತೂಹಲಕಾರಿ ಪ್ರಶ್ನೆಯಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು