Home ದೇಶ ಶಾ ಹೇಳಿಕೆ ಖಂಡಿಸಿ ದಲಿತ ಸಂಘನೆಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ, ಬಂಧನ

ಶಾ ಹೇಳಿಕೆ ಖಂಡಿಸಿ ದಲಿತ ಸಂಘನೆಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ, ಬಂಧನ

ಹಾಸನ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ಖಂಡಿಸಿ ಹಾಸನದ ಭುವನಹಳ್ಳಿ ಬೈಪಾಸ್ ಬಳಿ ವಿವಿಧ ದಲಿತ ಪರ ಸಂಘಟನೆಗಳು ರಾಷ್ಟಿಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿದ ಘಟನೆ ನಡೆಯಿತು.ಪ್ರತಿಭಟನೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಸಚಿವ ಸಂಪುಟದಿಂದ ವಜಾ ಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಬಿಜೆಪಿ ಹಾಗೂ ಗೃಹ ಸಚಿವ ಅಮಿತ್ ಷಾ ವಿರುದ್ಧ ಘೋಷಣೆ ಕೂಗುವ ಮೂಲಕ ಅಮಿತ್ ಶಾ ರಾಜಿನಾಮೆಗೆ ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ನಕ್ಸಲರ ಬಂಧಿಸಿ ಇದೆ ಹೆದ್ದಾರಿಯಲ್ಲಿ ಪೊಲೀಸ್ ವಾಹನ ಹೋಗುವದರಿಂದ ಹತ್ತು ನಿಮಿಷ ಮೊದಲೆ ಪ್ರತಿಭಟಗಾರರನ್ನು ಬಂಧಿಸಿ, ಪ್ರತಿಭಟನೆ ತೆರವು ಮಾಡಿಸಿದರು.ರಸ್ತೆ ತಡೆಗೂ ಮುನ್ನ ಬಹಿರಂಗ ಸಭೆ ನಡೆಸಿ ಮಾತನಾಡಿದ ಸಿಐಟಿಯು ಮುಖಂಡ ಧರ್ಮೇಶ್ ಹಾಗೂ ಜೈ ಭೀಮ್ ಬ್ರಿಗೇಡ್ ಜಿಲ್ಲಾದ್ಯಕ್ಷ ರಾಜೇಶ್, ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗೆ ಸಂಸತ್ ನಲ್ಲಿ ವ್ಯಂಗ್ಯವಾಗಿ ಮಾತನಾಡುವ ಜೊತೆಗೆ ಅಂಬೇಡ್ಕರ್ ಬಗ್ಗೆ ಮಾತನಾಡುವ ಬದಲು ದೇವರ ನಾಮ ಜಪ ಮಾಡಿದ್ದರೆ ಮೋಕ್ಷ ಸಿಗುತ್ತಿತ್ತು ಎಂಬ ಮಾತನ್ನು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಶಾ ಅಪಾಮನ ಮಾಡಿದ್ದಾರೆ ಅವರ ಸಂವಿಧಾನದ ಆಧಾರದ ಮೇಲೆ ಸಚಿವರಾಗಿರುವ ಶಾ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೆಡಬೇಕು ಎಂದು ಆಗ್ರಹಿಸಿದರು.

ಅಂಬೇಡ್ಕರ್ ಎಂಬುದು ಒಂದು ವಿಚಾರ ಅವರ ಬಗ್ಗೆ ನಾಲಿಗೆ ಹರಿಬಿಡುವ ಮುನ್ನ ಎಚ್ಚರಿಕೆ ಇರಬೇಕು, ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾ ಗೊಳಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಹಾಸನ್ ಬಂದೆ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು. ಕನಿಷ್ಠ ತಾವು ಹೇಳಿದ ಮಾತಿಗೆ ಅಮಿತ್ ಶಾ ಅವರು ಕ್ಷಮೆ ಕೇಳುವ ಸೌಜನ್ಯವನ್ನು ತೋರಿಸಿಲ್ಲ ಅವರ ಉದ್ಧಟತನಕ್ಕೆ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ತಮ್ಮ ಹೋರಾಟದ ಮೂಲಕವೇ ಉತ್ತರ ನೀಡಲಿವೆ. ಅವರು ತಮ್ಮ ಸ್ಥಾನದಲ್ಲಿ ಮುಂದುವರೆದರೆ ಸಂವಿಧಾನಕ್ಕೆ ವಿರುದ್ಧವಾದ ನಡವಳಿಕೆಗಳನ್ನು ಮುಂದುವರಿಸುತ್ತಲೇ ಇರುತ್ತಾರೆ ಆದುದರಿಂದ ಅವರಿಗೆ ತಕ್ಕ ಪಾಠ ಕಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಶಾ ವಿರುದ್ಧ ಕ್ರಮ ಕೈಗೊಳ್ಳುವ ಬದಲಾಗಿ ಅವರ ಪರವಾಗಿಯೇ ಮಾತನಾಡುವ ಮೂಲಕ ಸಂವಿಧಾನದ ಆಶಯಗಳಿಗೆ ಅಪಚಾರ ಮಾಡುವ ಕೆಲಸ ಮಾಡಿದ್ದಾರೆ. ಇದು ಸಂವಿಧಾನದ ಬಗ್ಗೆ ಬಿಜೆಪಿ ಸರ್ಕಾರದ ನಿಲುವನ್ನು ಸೂಚಿಸುತ್ತದೆ. ಈ ಬಗ್ಗೆ ಈಗಾಗಲೇ ದೇಶದ ಮೂಲೆ ಮೂಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ ಆದರೂ ಈ ವರೆಗೆ ಶಾ ವಿರುದ್ಧ ಕ್ರಮ ಜರುಗಿಸದೆ ಇರುದು ವಿಜೆಪಿಯ ಸಂವಿಧಾನ ವಿರೋಧಿ ನೀತಿಯನ್ನು ಸೂಚಿಸುತ್ತದೆ ಎಂದು ಕಿಡಿ ಕಾರಿದರು.

ಪ್ರತಿಭಟನೆಯಲ್ಲಿ ದಸಂಸ ಮುಖಂಟಾದ ಎಚ್.ಕೆ ಸಂದೇಶ್, ಸಿಐಟಿಯು ಧರ್ಮೇಶ್,ಜಗದೀಶ್, ಎಂ.ಸೋಮಶೇಖರ್, ದಂಡೋರ ವಿಜಯ್ ಕುಮಾರ್, ಅಂಬುಗೆ ಮಲ್ಲೇಶ್, ಜೈ ಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್, ಮಲ್ಲಿಗೆ ವಾಳು ದೇವಪ್ಪ, ಅಬ್ದುಲ್ ಸಮದ್, ದೇವರಾಜ್, ಈರೇಶ್ ಈರೆಹಳ್ಳಿ, ಕೃಷ್ಣದಾಸ್, ವಿಠಲ್, ನವೀನ್, ಅರವಿಂದ್, ಇರ್ಷಾದ್, ಕುಮಾರಸ್ವಾಮಿ, ಇತರರು ಇದ್ದರು.

You cannot copy content of this page

Exit mobile version