Sunday, June 22, 2025

ಸತ್ಯ | ನ್ಯಾಯ |ಧರ್ಮ

ದಲಿತ ವ್ಯಕ್ತಿಯ ಮೇಲಿನ ಹಲ್ಲೆ ಭಜರಂಗ ದಳದ ಕಾರ್ಯಕರ್ತನ ಹಲ್ಲೆಯನ್ನು ಖಂಡಿಸಿ ಸಕಲೇಶಪುರದ ದಲಿತ ಪರ ಸಂಘಟನೆಗಳಿಂದ ಪ್ರತಿಭಟನೆ.

ಆಗಸ್ಟ್ 20 ರಂದು ಹಲಸುಲಿಗೆ ಗ್ರಾಮದಲ್ಲಿ ಜಾನುವಾರು ಸಾಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಭಜರಂಗ ದಳದ ಕಾರ್ಯಕರ್ತನೊಬ್ಬ ಮಂಜುನಾಥ್ ಎಂಬವರ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿದ್ದ.

ಇದನ್ನು ಖಂಡಿಸಿ ಆಗಸ್ಟ್ 22 ರಂದು ಸಕಲೇಶಪುರ ತಾಲ್ಲೂಕಿನ ದಲಿತ ಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.

ಚಿಕ್ಕಮಗಳೂರಿನ ಭಜರಂಗದಳ , ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣಾ ವೇದಿಕೆ, ಶ್ರೀ ರಾಮಸೇನೆ ಸಂಘಟನೆಗಳ ಕಾರ್ಯಕರ್ತರು ಗೋ ರಕ್ಷಣೆ ಮತ್ತು ಹಿಂದುತ್ವದ ಹೆಸರಿನಲ್ಲಿ ಸಮ ಸಮಾಜದ ಶಾಂತಿಯನ್ನು ಕದಡುತ್ತಿದ್ದಾರೆ. ಅಲ್ಲದೇ ಅನೈತಿಕ ಪೋಲಿಸ್ ಗಿರಿ ನಡೆಸುತ್ತಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಎಸಗಿದ್ದಾರೆ.

ಹಾಸನ ಜಿಲ್ಲೆಯಾದ್ಯಂತ ದಲಿತರು, ರೈತರು, ಕೂಲಿಕಾರ್ಮಿಕರು, ನಿರ್ಗತಿಕ ಮಹಿಳೆಯರು, ಧಾರ್ಮಿಕ ಅಲ್ಪ ಸಂಖ್ಯಾತರು, ಮತ್ತು ದುರ್ಬಲ ವರ್ಗದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ವನ್ನು ತೀವ್ರವಾಗಿ ಖಂಡಿಸಿ ಇಂತಹ ಸಂಘಟನೆಗಳನ್ನು ಕೂಡಲೇ ನಿಷೇಧಿಸುವಂತೆ ಸರ್ಕಾರಕ್ಕೆ ಒತ್ತಡ ಹೇರಲು ಜಿಲ್ಲಾ ದಲಿತ ಪರ ಸಂಘಟನೆಗಳ ಒಕ್ಕೂಟವೂ
ಸಪ್ಟೆಂಬರ್ 15 ರಂದು ಜಿಲ್ಲಾ ಕೇಂದ್ರ ಹಾಸನದಲ್ಲಿ- ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಪ್ರತಿಭಟನೆಯ ಪೂರ್ವತಯಾರಿಗಾಗಿ ಸಪ್ಟೆಂಬರ್ 7 ರಂದು ಮಧುಹ್ನ 3 ಗಂಟೆಗೆ ಸಕಲೇಶಪುರದ ಪ್ರವಾಸಿ ಮಂದಿರದಲ್ಲಿ ಸಕಲೇಶಪುರ ತಾಲ್ಲೂಕಿನ ದಲಿತ ಪರ ಸಂಘಟನೆಗಳ ಕಾರ್ಯಕರ್ತ ರೂ,ಮುಖಂಡರು, ಹಾಗೂ ದಲಿತ ಸಮುದಾಯದ ಎಲ್ಲಾ ಮುಖಂಡರುಗಳ ಸಭೆ ಏರ್ಪಡಿಸಲಾಗಿದೆ ಎಂದು ಹಾನುಬಾಳಿನ ದಲಿತ ಮುಖಂಡ ಹೆಚ್.ಬಿ.ಗೋಪಾಲ್ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page