Friday, June 20, 2025

ಸತ್ಯ | ನ್ಯಾಯ |ಧರ್ಮ

ಹುಲಿ ಉಗುರಿನ ಪ್ರಕರಣ : ದರ್ಶನ್, ರಾಕ್ ಲೈನ್ ವೆಂಕಟೇಶ್, ಜಗ್ಗೇಶ್ ಮನೆಯಲ್ಲಿ ತೀವ್ರ ಶೋಧ

ಹುಲಿ ಉಗುರು ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಜಗ್ಗೇಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿರೋದಾಗಿ ತಿಳಿದು ಬಂದಿದೆ. ಇದರ ಜೊತೆಗೆ ನಟ ದರ್ಶನ್ ಮನೆಗೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಹುಲಿ ಉಗಃರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಧ್ಯ ಮೂರೂ ಸೆಲೆಬ್ರಿಟಿಗಳ ಮನೆಯನ್ನು ಜಾಲಾಡಿರುವ ಅಧಿಕಾರಿಗಳು ಈಗಾಗಲೇ ದರ್ಶನ್ ಮನೆಯಲ್ಲಿ ಇರುವ ಹುಲಿ ಉಗುರನ್ನು ವಶಕ್ಕೆ ಪಡೆದರೆ, ಜಗ್ಗೇಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಮನೆಯಲ್ಲಿ ತೀವ್ರ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಮಲ್ಲೇಶ್ವರಂನಲ್ಲಿರುವಂತ ನಟ ಜಗ್ಗೇಶ್ ಅವರ ನಿವಾಸಕ್ಕೆ ಭೇಟಿ ನೀಡಿರುವಂತ ಅರಣ್ಯ ಇಲಾಖೆಯ ಅಧಿಕಾರಿಗಳು, ಜಗ್ಗೇಶ್ ಅವರ ಪತ್ನಿಯೊಂದಿಗೆ ಚರ್ಚಿಸುತ್ತಿದ್ದು, ಮನೆ ಪರಿಶೀಲನೆಯನ್ನು ಕೆಲವೇ ಕ್ಷಣಗಳಲ್ಲಿ ನಡೆಸೋದಕ್ಕೆ ಸಿದ್ಧತೆಯನ್ನು ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಮಲ್ಲೇಶ್ವರಂನ ಜಗ್ಗೇಶ್ ನಿವಾಸದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತೆರಳಿದಂತ ವೇಳೆಯಲ್ಲಿ ಅವರು ಮನೆಯಲ್ಲಿ ಇಲ್ಲ ಎಂಬುದಾಗಿ ತಿಳಿದು ಬಂದಿದೆ.

ಮಹಾಲಕ್ಷ್ಮಿ ಲೇಔಟ್​ನಲ್ಲಿ ನಟ ರಾಕ್​ಲೈನ್​ ವೆಂಕಟೇಶ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಇಲ್ಲ ಎಂದು ಕೆಲಸದವರು ಹೇಳಿದ್ದಾರೆ. ಬಳಿಕ ಮನೆಯಲ್ಲಿದ್ದ ಮಗನನ್ನು ಕರೆದು ಸರ್ಚ್​ ವಾರೆಂಟ್​​ಗೆ ಸಹಿ ಹಾಕಿಸಿಕೊಂಡ ಅಧಿಕಾರಿಗಳು ಮನೆಯೊಳಗೆ ಹೋಗಿ ಶೋಧ ಶುರು ಮಾಡಿದ್ದಾರೆ.

ಇನ್ನು ನಿಖಿಲ್ ಕುಮಾರಸ್ವಾಮಿ ಮೇಲೂ ಹುಲಿ ಉಗುರು ಧರಿಸಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿಖಿಲ್ “ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು” ಎಂದು ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ವಿನಂತಿ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page