Wednesday, September 10, 2025

ಸತ್ಯ | ನ್ಯಾಯ |ಧರ್ಮ

ಕಡತಗಳ ಕುರಿತು ನಿರ್ದಿಷ್ಟ ಸಮಯದೊಳಗೆ ನಿರ್ಧರಿಸಿ!: ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ

ಬೆಂಗಳೂರು, ಸೆ. 10: ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡುವ ಅಧಿಕಾರವನ್ನು ನಿಯಂತ್ರಿಸುವ ಸಂವಿಧಾನದ ವಿಧಿ 200ರಲ್ಲಿ ‘ಸಾಧ್ಯವಾದಷ್ಟು ಬೇಗ’ ಎಂಬ ಪದವಿಲ್ಲದಿದ್ದರೂ, ರಾಜ್ಯಪಾಲರು ನಿರ್ದಿಷ್ಟ ಸಮಯದೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ಶಾಸಕಾಂಗವು ಅಂಗೀಕರಿಸಿ ಕಳುಹಿಸಿದ ವಿಧೇಯಕಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಲು ಅಥವಾ ರಾಷ್ಟ್ರಪತಿಗೆ ಸಲ್ಲಿಸಲು ನ್ಯಾಯಾಲಯವು ನಿರ್ದಿಷ್ಟ ಕಾಲಮಿತಿ ನಿಗದಿಪಡಿಸಬಹುದೇ ಎಂಬ ವಿಷಯದ ಕುರಿತು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠದ ಮುಂದೆ ಎಂಟನೇ ದಿನವೂ ವಿಚಾರಣೆ ಮುಂದುವರೆಯಿತು.

ವಿಧಾನಸಭೆಗಳು ಅಂಗೀಕರಿಸಿದ ವಿಧೇಯಕಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಅಧಿಕಾರಗಳನ್ನು ವಿಧಿ 200 ವಿವರಿಸುತ್ತದೆ. ಇದರ ಪ್ರಕಾರ, ರಾಜ್ಯಪಾಲರು ವಿಧೇಯಕಕ್ಕೆ ಒಪ್ಪಿಗೆ ನೀಡಬೇಕು, ಅಥವಾ ಒಪ್ಪಿಗೆಯನ್ನು ತಡೆಹಿಡಿಯಬೇಕು, ಇಲ್ಲವೇ ಮರುಪರಿಶೀಲನೆಗಾಗಿ ಹಿಂದಿರುಗಿಸಬೇಕು, ಅಥವಾ ರಾಷ್ಟ್ರಪತಿಗೆ ಕಾಯ್ದಿರಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ. ಈ ವಿಷಯದಲ್ಲಿ ರಾಜ್ಯಪಾಲರು ನಿರ್ದಿಷ್ಟ ಸಮಯದೊಳಗೆ ನಿರ್ಧಾರ ತೆಗೆದುಕೊಳ್ಳಬೇಕೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಪ್ರಕರಣದ ವಾದಗಳನ್ನು ಸೆಪ್ಟೆಂಬರ್ 10ರಂದು ಪೂರ್ಣಗೊಳಿಸಲು ಪೀಠ ನಿರ್ಧರಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page