Monday, May 26, 2025

ಸತ್ಯ | ನ್ಯಾಯ |ಧರ್ಮ

ನವರಾತ್ರಿ ಸಮಯದಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಲು ದೆಹಲಿ ಬಿಜೆಪಿ ಶಾಸಕನ ಒತ್ತಾಯ

ಮುಂಬರುವ ನವರಾತ್ರಿಯ ಸಮಯದಲ್ಲಿ ದೆಹಲಿಯಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಬೇಕೆಂದು ಭಾರತೀಯ ಜನತಾ ಪಕ್ಷದ ಶಾಸಕ ರವೀಂದರ್ ಸಿಂಗ್ ನೇಗಿ ಸೋಮವಾರ ಒತ್ತಾಯಿಸಿದ್ದಾರೆ.

“ಕೆಲವು ದಿನಗಳ ಹಿಂದೆ, ನಾನು ಮಂಗಳವಾರ ದೇವಸ್ಥಾನಕ್ಕೆ ಹೋದಾಗ , ದೇವಸ್ಥಾನದ ಮುಂದೆಯೇ ಮಾಂಸದ ಅಂಗಡಿ ತೆರೆದಿರುವುದನ್ನು ನೋಡಿದೆ. ಇದನ್ನು ನೋಡಿ ನನಗೆ ತುಂಬಾ ಬೇಸರವಾಯಿತು, ಆದ್ದರಿಂದ ಮಂಗಳವಾರ ದೇವಸ್ಥಾನಗಳ ಹೊರಗಿನ ಅಂಗಡಿಗಳನ್ನು ಮುಚ್ಚುವಂತೆ ವ್ಯಾಪಾರಿಗಳಿಗೆ ವಿನಂತಿಸಿದೆ. ಅವರು ತಕ್ಷಣ ಒಪ್ಪಿಕೊಂಡರು,” ಎಂದು ಪತ್ಪರ್‌ಗಂಜ್‌ನ ಶಾಸಕರು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ನವರಾತ್ರಿ ಹಿಂದೂ ದೇವತೆ ದುರ್ಗೆಗೆ ಅರ್ಪಿತವಾಗಿರುವುದರಿಂದ ಅದಕ್ಕೆ ಆಳವಾದ ಮಹತ್ವವಿದೆ ಎಂದು ಬಿಜೆಪಿ ನಾಯಕ ಹೇಳಿದರು. “ಈ ಒಂಬತ್ತು ದಿನಗಳಲ್ಲಿ ಎಲ್ಲರೂ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ನಾವು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಉತ್ಸವ ಮಾರ್ಚ್ 30 ರಂದು ಪ್ರಾರಂಭವಾಗಿ ಏಪ್ರಿಲ್ 6 ರಂದು ಕೊನೆಗೊಳ್ಳಲಿದೆ.

ಈ ಅವಧಿಯಲ್ಲಿ ದೆಹಲಿಯಾದ್ಯಂತ ಬಂದ್ ಜಾರಿಗೊಳಿಸದಿದ್ದರೆ, ತಮ್ಮ ಕ್ಷೇತ್ರದಲ್ಲಿ ಅದನ್ನು ಜಾರಿಗೆ ತರುವುದನ್ನು ಖಚಿತಪಡಿಸಿಕೊಳ್ಳುವುದಾಗಿ ನೇಗಿ ಹೇಳಿದ್ದಾರೆ.

ಈ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ದೆಹಲಿ ಪುರಸಭೆ ಆಯುಕ್ತರಿಗೆ ಪತ್ರ ಬರೆದಿದ್ದೇನೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ವಿನೋದ್ ನಗರ ವಾರ್ಡ್‌ನ ಮಾಜಿ ಕೌನ್ಸಿಲರ್ ನೇಗಿ, ಈ ಹಿಂದೆಯೂ ನವರಾತ್ರಿಯ ಸಮಯದಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಬೇಕೆಂದು ಕರೆ ನೀಡಿದ್ದರು.

ಈ ವರ್ಷದ ಆರಂಭದಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಂಡ ವೀಡಿಯೊಗಳ ಸರಣಿಯಲ್ಲಿ, ಅವರು ಹಿಂದೂ ಬೀದಿ ವ್ಯಾಪಾರಿಗಳನ್ನು ತಮ್ಮ ಮಾರಾಟ ಬಂಡಿಗಳ ಮೇಲೆ ಕೇಸರಿ ಧ್ವಜಗಳನ್ನು ಹಾಕುವಂತೆ ಕೇಳಿಕೊಳ್ಳುತ್ತಿರುವುದು ಕಂಡುಬಂದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page