Friday, September 13, 2024

ಸತ್ಯ | ನ್ಯಾಯ |ಧರ್ಮ

ಅರವಿಂದ ಕೇಜ್ರಿವಾಲ್‌ ಬಿಡುಗಡೆ: ಸ್ವತಂತ್ರಗೊಂಡ ಜೈಲು ಹಕ್ಕಿ!

ಹೊಸದೆಹಲಿ: ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಕೆಲವೇ ಗಂಟೆಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬಂದಿದ್ದಾರೆ.

ಕೇಜ್ರಿವಾಲ್ ಅವರನ್ನು ಸ್ವಾಗತಿಸಲು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ನೂರಾರು ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಮತ್ತು ಪಕ್ಷದ ಹಿರಿಯ ನಾಯಕರು ಜೈಲಿನ ಹೊರಗೆ ಕಾಯುತ್ತಿದ್ದರು.

ಮಳೆಯಲ್ಲಿ ನೆನೆಯುತ್ತಿದ್ದ ಮಾನ್, ಸಿಸೋಡಿಯಾ ಅವರು ಟ್ರಕ್‌ನ ಮೇಲಿಂದ ಕೇಜ್ರಿವಾಲ್ ಅವರನ್ನು ಸ್ವಾಗತಿಸುತ್ತಾ ಘೋಷಣೆಗಳನ್ನು ಕೂಗಿದರು. “ಜೈಲ್ ಕೆ ತಾಲೇ ಟೂಟ್ ಗಯೇ, ಕೇಜ್ರಿವಾಲ್ ಚೂಟ್ ಗಯೇ”, “ಭ್ರಷ್ಟಾಚಾರ್ ಕಾ ಏಕ್ ಹಿ ಕಾಲ್, ಕೇಜ್ರಿವಾಲ್, ಕೇಜ್ರಿವಾಲ್” ಮುಂತಾದ ಘೋಷಣೆಗಳು ಮುಗಿಲು ಮುಟ್ಟಿದವು.

ಕೇಜ್ರಿವಾಲ್ ಅವರು ಕಾರಿನಲ್ಲಿ ತಿಹಾರ್‌ ಜೈಲಿನಿಂದ ಹೊರಬಂದರು, ಅವರ ಭದ್ರತಾ ಬೆಂಗಾವಲು ಪಡೆ ಹಿಂಬಾಲಿಸಿತು.

ಎಎಪಿ ಮುಖ್ಯಸ್ಥ ಕೇಜ್ರಿವಾಲ್‌ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಜೂನ್ 26ರಂದು ಬಂಧಿಸಿತ್ತು. ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ಆಗಸ್ಟ್ 5ರ ಆದೇಶವನ್ನು ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page