Home ದೆಹಲಿ ಕ್ಷೇತ್ರ ಪುನರ್ವಿಂಗಡಣೆ: ಸಂಸತ್ತಿನ ಮುಂದೆ ಡಿಎಂಕೆ ಪ್ರತಿಭಟನೆ

ಕ್ಷೇತ್ರ ಪುನರ್ವಿಂಗಡಣೆ: ಸಂಸತ್ತಿನ ಮುಂದೆ ಡಿಎಂಕೆ ಪ್ರತಿಭಟನೆ

0

ಹೊಸದೆಹಲಿ: ಕ್ಷೇತ್ರ ಪುನರ್ವಿಂಗಡಣೆ ವಿಷಯಕ್ಕೆ ಸಂಬಂಧಿಸಿದಂತೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಿತು. ಡಿಎಂಕೆ ಸಂಸದರಾದ ಕನಿಮೋಳಿ, ಟಿ. ಶಿವ ಮತ್ತು ದಯಾನಿಧಿ ಮಾರನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಅವರು “ಫೇರ್ ಡಿಲಿಮಿಟೇಶನ್” ಎಂದು ಬರೆದಿರುವ ಬ್ಯಾನರ್ ಒಂದನ್ನು
ಈ ಸಂದರ್ಭದಲ್ಲಿ ಪ್ರದರ್ಶಿಸಿದರು. ಡಿಎಂಕೆ ಪಕ್ಷವು ಕ್ಷೇತ್ರ ಪುನರ್ವಿಂಗಡಣೆಯನ್ನು ತೀವ್ರವಾಗಿ ವಿರೋಧಿಸುತ್ತಿದೆ. ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲೂ ಈ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದೆ. ಮಾರ್ಚ್ 10ರಂದು ಪ್ರಾರಂಭವಾದ ಸಂಸತ್ತಿನ ಬಜೆಟ್ ಅಧಿವೇಶನ ಏಪ್ರಿಲ್ 14ರವರೆಗೆ ನಡೆಯಲಿದೆ.

ತಮಿಳುನಾಡು ಸಿಎಂ ಸ್ಟಾಲಿನ್ ಅವರು ಕ್ಷೇತ್ರ ಪುನರ್ವಿಂಗಡಣೆಯನ್ನು ‘ಒಕ್ಕೂಟದ ಮೇಲಿನ ಬಹಿರಂಗ ದಾಳಿ’ ಎಂದು ಬಣ್ಣಿಸಿದ್ದಾರೆ. ಈ ಕ್ರಮದ ವಿರುದ್ಧ ಅವರು ಒಗ್ಗಟ್ಟಿನ ರಾಜಕೀಯ ಹೋರಾಟಕ್ಕೆ ಕರೆ ನೀಡಿದ್ದಾರೆ. ಮಾರ್ಚ್ 8ರಂದು, ಸ್ಟಾಲಿನ್ ಅವರು NDA ಆಡಳಿತವಿರುವ ರಾಜ್ಯಗಳು ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರಗಳನ್ನು ಬರೆದರು. ಈ ಅನ್ಯಾಯದ ಕೃತ್ಯದ ವಿರುದ್ಧದ ಹೋರಾಟದಲ್ಲಿ ತನ್ನೊಂದಿಗೆ ಸೇರುವಂತೆ ಪತ್ರದಲ್ಲಿ ಮನವಿ ಮಾಡಲಾಗಿತ್ತು.

ಕೇರಳ ಸಿಎಂ ಪಿಣರಾಯಿ ವಿಜಯನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಒಡಿಶಾ ಸಿಎಂ ಮೋಹನ್ ಚರಣ್ ಮಾಂಝಿ ಮತ್ತು ಆಯಾ ರಾಜ್ಯಗಳ ಎಲ್ಲಾ ರಾಜಕೀಯ ಪಕ್ಷಗಳ ಅಧ್ಯಕ್ಷರನ್ನು ಕೋರಲಾಯಿತು.

ಈ ಸರ್ವಪಕ್ಷಗಳ ಸಭೆಯಲ್ಲಿ ಒಟ್ಟು 22 ರಾಜಕೀಯ ಪಕ್ಷಗಳು ಭಾಗವಹಿಸಲಿವೆ ಎನ್ನಲಾಗಿದೆ.

You cannot copy content of this page

Exit mobile version