Saturday, June 21, 2025

ಸತ್ಯ | ನ್ಯಾಯ |ಧರ್ಮ

ಡೆಂಗ್ಯೂ ಪ್ರಕರಣಗಳು ಹೆಚ್ಚಳ: 7 ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಿದ ಕೇರಳ ಸರ್ಕಾರ

ತಿರುವನಂತಪುರಂ: ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿರುವ ಕಾರಣ, ಕೇರಳ ಸರ್ಕಾರ ಇಂದು ರಾಜ್ಯದ ಏಳು ಜಿಲ್ಲೆಗಳಿಗೆ ಕಟ್ಟೆಚ್ಚರ ವಹಿಸಿದೆ.

ಈ ಕುರಿತು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದು, ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ, ಪಾಲಕ್ಕಾಡ್, ಕೋಝಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳಗಳು, ಮನೆಗಳನ್ನು ಸ್ವಚ್ಛಗೊಳಿಸುವ ಮೂಲಕ ಮತ್ತು ನಿಂತ ನೀರನ್ನು ತೆಗೆದುಹಾಕುವ ಮೂಲಕ ಪ್ರತಿ ವಾರ ಒಣ ದಿನ ಅಭಿಯಾನವನ್ನು ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಜಾರ್ಜ್ ಹೇಳಿದರು.

ಈ ಹಿನ್ನಲೆಯಲ್ಲಿ, ʼಇತರ ಜಿಲ್ಲೆಗಳು ಸಹ ಜಾಗರೂಕರಾಗಿರಬೇಕು ಮತ್ತು ಸೊಳ್ಳೆ ಸಂತಾನೋತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವಲ್ಲಿ ತೊಡಗಿಸಿಕೊಳ್ಳಬೇಕುʼ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂಗಾರು ಮಳೆಯಾಗುತ್ತಿದ್ದು, ಹಲವೆಡೆ ಜಲಾವೃತವಾಗುವ ಸಾಧ್ಯತೆ ಇದೆ. ಹೀಗಾಗಿ ಡೆಂಗ್ಯೂ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಎಲ್ಲಾ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಂತರ ವಿವಿಧ ಜಿಲ್ಲೆಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲು ಸಚಿವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಸಭಯಲ್ಲಿ, ನಿರ್ಮಾಣ ಸ್ಥಳಗಳು, ಒಳಚರಂಡಿ ಮತ್ತು ಇತರ ಸಂಭಾವ್ಯ ಸ್ಥಳಗಳನ್ನು ನೀರು ಶೇಖರಣೆಗಾಗಿ ಪರಿಶೀಲಿಸಲು ಮತ್ತು ಸೊಳ್ಳೆ ಸಂತಾನೋತ್ಪತ್ತಿ ಮೂಲಗಳನ್ನು ನಾಶಪಡಿಸಲು ಸ್ಥಳೀಯ ಸ್ವಯಂ ಆಡಳಿತ  ಸಂಸ್ಥೆಗಳಿಗೆ ನಿರ್ದೇಶನಗಳನ್ನು ನೀಡಲಾಯಿತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page