ಹಣದುಬ್ಬರ ಮತ್ತು ನಿರುದ್ಯೋಗದ ವಿಚಾರವನ್ನು ಕೇಂದ್ರೀಕರಿಸಿ ಇಂದು ಕಾಂಗ್ರೆಸ್ ಪಕ್ಷ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಮುಖ ನಗರಗಳು, ಪ್ರಮುಖ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಇರಲಿದೆ.
ಅದರಂತೆ ದೆಹಲಿಯ ಜಂತರ್ ಮಂತರ್ ಹೊರತುಪಡಿಸಿ ನಗರದ ಬಹುತೇಕ ಭಾಗಗಳಲ್ಲಿ ಪೊಲೀಸ್ ಇಲಾಖೆ 144 ಸೆಕ್ಷನ್ ಜಾರಿ ಮಾಡಿದೆ. ನವದೆಹಲಿಯ ಬಹುತೇಕ ಕಡೆಗಳಲ್ಲಿ ಪೊಲೀಸ್ ತುಕಡಿಗಳು ಮುಂಜಾನೆಯಿಂದಲೇ ಬೀಡು ಬಿಟ್ಟಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿವೆ.
ಇನ್ನು ದೇಶದಲ್ಲಿ ಕಾಂಗ್ರೆಸ್ಸೇತರ ಆಡಳಿತ ಇರುವ ರಾಜ್ಯಗಳ ಮತ್ತು ಬಿಜೆಪಿ ಆಡಳಿತ ಇರುವ ಪ್ರಮುಖ ನಗರಗಳು, ಜಿಲ್ಲಾ ಕೇಂದ್ರ ಪ್ರದೇಶಗಳಲ್ಲೂ ಈ ಪ್ರತಿಭಟನೆ ನಡೆಯುವ ಸಾಧ್ಯತೆಗಳಿವೆ. ಹಲವು ಕಡೆಗಳಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕಛೇರಿ ಬಳಿ ತೀವ್ರ ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು ಬಹುತೇಕ ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿದ ದೃಶ್ಯಗಳು ಕಂಡುಬಂದಿದೆ.