Tuesday, October 14, 2025

ಸತ್ಯ | ನ್ಯಾಯ |ಧರ್ಮ

‘ಗ್ಯಾರಂಟಿಗಳು ಅಭಿವೃದ್ಧಿಗೆ ಅಡ್ಡಿ’ ಹೇಳಿಕೆ ನೀಡಿದ ಮರುದಿನವೇ ಯೂ-ಟರ್ನ್‌ ಹೊಡೆದ ದೇಶಪಾಂಡೆ

ದಾಂಡೇಲಿ(ಉತ್ತರ ಕನ್ನಡ ಜಿಲ್ಲೆ): ಕಾಂಗ್ರೆಸ್‌ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ‘ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ’ ಒಂದು ದಿನದ ನಂತರ ತಮ್ಮ ನಿಲುವನ್ನು ಮೃದುಗೊಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಆಡಳಿತವನ್ನು ಶ್ಲಾಘಿಸಿದ ಅವರು, ತಾವು ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ದಾಂಡೇಲಿಯಲ್ಲಿ ನಡೆದ ಸಭೆಯಲ್ಲಿ ಗ್ಯಾರಂಟಿಗಳ ಬಗ್ಗೆ ನಾನು ನೀಡಿದ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ” ಎಂದು ದೇಶಪಾಂಡೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಸಿದ್ದರಾಮಯ್ಯ ಅವರು ಬಡವರಿಗಾಗಿ ಹೋರಾಡುವ ನಿಜವಾದ ನಾಯಕ ಮತ್ತು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದಷ್ಟೇ ನಾನು ಹೇಳಿದ್ದೆ” ಎಂದಿದ್ದಾರೆ.

“ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುವುದು ನನ್ನ ಉದ್ದೇಶವಾಗಿರಲಿಲ್ಲ. ಸಿದ್ದರಾಮಯ್ಯನವರ ಜನಪರ ನಿಲುವನ್ನು ಹಾಡಿಹೊಗಳುವುದು ನನ್ನ ಉದ್ದೇಶವಾಗಿತ್ತು. ನಾನು ಅವರನ್ನು ಟೀಕಿಸಲಿಲ್ಲ, ಅವರ ನೀತಿಗಳನ್ನು ಮೆಚ್ಚಿದೆ. ಗ್ಯಾರಂಟಿಗಳು ಅಭಿವೃದ್ಧಿಯನ್ನು ನಿಧಾನಗೊಳಿಸಿವೆ ಎಂದು ನಾನು ಹೇಳಿಲ್ಲ. ನನ್ನ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ” ಎಂದು ದೇಶಪಾಂಡೆ ಸ್ಪಷ್ಟಪಡಿಸಿದ್ದಾರೆ.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಈ ಹಿರಿಯ ಕಾಂಗ್ರೆಸ್ ನಾಯಕರು, ಭಾನುವಾರ ನೀಡಿದ್ದ ಹೇಳಿಕೆಯಲ್ಲಿ, ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಯ ವೇಗಕ್ಕೆ ಅಡ್ಡಿಯಾಗುವ ಆರ್ಥಿಕ ಹೊರೆಯನ್ನು ಉಂಟುಮಾಡಿವೆ ಮತ್ತು ‘ತಾನೇ ಮುಖ್ಯಮಂತ್ರಿಯಾಗಿದ್ದರೆ ಅವುಗಳನ್ನು ಜಾರಿ ಮಾಡುತ್ತಿರಲಿಲ್ಲ’ ಎಂದು ಹೇಳಿರುವುದಾಗಿ ವರದಿಯಾಗಿತ್ತು. ಆದರೆ ಇದೀಗ ದೇಶಪಾಂಡೆ ಅವರು ತಮ್ಮ ಹೇಳಿಕೆಯಿಂದ ಹಿಂದೆ ಸರಿದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page