Friday, June 21, 2024

ಸತ್ಯ | ನ್ಯಾಯ |ಧರ್ಮ

ಡಾ.ಅಂಬೇಡ್ಕರರನ್ನು ಅವಮಾನಿಸಿತೇ ‘ನಮ್ಮ ಮೆಟ್ರೋ’? : ದಲಿತ ಮುಖಂಡರಿಂದ ಪ್ರತಿಭಟನೆ

ಬೆಂಗಳೂರು: ಗಣರಾಜ್ಯೊತ್ಸವ ಸಮಾರಂಭಗಳಂದು ರಾಜ್ಯದ ಸರ್ಕಾರಿ ಕಚೇರಿಗಳು.ಸರಕಾರಿ ಶಾಲಾ ಕಾಲೇಜು, ಹಾಗೂ ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಕಚೇರಿಗಳಲ್ಲೂ ಸಂವಿಧಾನಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಗೌರವಿಸುವುದು ಕಡ್ಡಾಯ. ಈ ಕುರಿತು 2020ರಲ್ಲಿ ಸರ್ಕಾರವೇ ಆದೇಶ ಹೊರಡಿಸಿದೆ.

ಆದರೆ, ಬಿಎಂಆರ್ ಸಿಎಲ್ (ನಮ್ಮ ಮೆಟ್ರೋ) ಸರ್ಕಾರದ ಈ ಆದೇಶವನ್ನು ನಿರ್ಲಕ್ಷಿಸಿ ಡಾ.ಅಂಬೇಡ್ಕರ್‌ ಅವರಿಗೆ ಅವಮಾನಿಸಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಮೆಟ್ರೋ ಆಡಳಿತದ ಜ.26ರ ಧ್ವಜಾರೋಹನ ಕಾರ್ಯಕ್ರಮದ ವೇದಿಕೆಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡದೇ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಲಾಗಿದೆ. ಇದನ್ನು ನಾವು ಸಹಿಸುವುದಿಲ್ಲ ಎಂದು ಬೈಯಪ್ಪನಹಳ್ಳಿ ಮೆಟ್ರೋ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನೆಕಾರರು ಎಚ್ಚರಿಕೆ ನೀಡಿದರು.

ದೇಶಕ್ಕೆ ಸಂವಿಧಾನದಂಥ ಮಹಾನ್ ಗ್ರಂಥ ನೀಡಿದ ಡಾ.ಬಿ.ಆರ್ ಅಂಬೇಡ್ಕರ್ ಎನ್ನುವುದೇ ಬಿಎಂಆರ್ ಸಿಎಲ್ ಗೆ ಗೊತ್ತಿಲ್ಲ ಎನ್ನಿಸುತ್ತದೆ. ಹಾಗಾಗಿಯೇ ಸರ್ಕಾರ ಈ ಬಗ್ಗೆ ಹೊರಡಿಸಿದ್ದ ಆದೇಶವನ್ನು ಮೆಟ್ರೋ ಅಧಿಕಾರಿಗಳು ಗಾಳಿಗೆ ತೂರಿದ್ದಾರೆ.

ಸರ್ಕಾರದ ಆದೇಶವನ್ನು ಎಲ್ಲಾ ಇಲಾಖೆಗಳು ಕೂಡ ಚಾಚೂತಪ್ಪದೇ ಪಾಲಿಸ್ತಿವೆ. ಆದರೆ ಎಲ್ಲರಿಗೂ ಒಂದು ನ್ಯಾಯವಾದ್ರೆ ಬಿಎಂಆರ್ ಸಿಎಲ್ ಗೆ ಇನ್ನೊಂದು ನ್ಯಾಯ ಎನ್ನುವಂತೆ ಮೆಟ್ರೋ ಸಂಸ್ಥೆಯ ಆಡಳಿತ ನಡೆದುಕೊಂಡಿದೆ.ಇದೆಲ್ಲಕ್ಕೂ ಕಾರ್ಯಕ್ರಮದ ಆಯೋಜನೆಯ ಉಸ್ತುವಾರಿ ವಹಿಸಿಕೊಂಡಿದ್ದರೆನ್ನಲಾದ ಕಾರ್ಯನಿರ್ವಾಹಕ ನಿರ್ದೇಶಕ ಶಂಕರ್ ಅವರೇ ಕಾರಣ ಎಂದು ಎಂದು ದಲಿತ ಮುಖಂಡರು ಆರೋಪಿಸಿದರು.

ಇದಕ್ಕೆ ಕಾರಣವಾದ ಕಾರ್ಯನಿರ್ವಾಹಕ ನಿರ್ದೇಶಕರನ್ನು ಅಮಾನತುಗೊಳಿಸಬೇಕು.ಇಲ್ಲವಾದಲ್ಲಿ ಬಿಎಂಆರ್ ಸಿಎಲ್ ಕಚೇರಿ ಆವರಣದಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಅಂಬೇಡ್ಕರ್ ಅವರಂಥ ಮಹಾನ್ ಚೇತನ ಇಲ್ಲದೆ ಇದ್ದಲ್ಲಿ ಇವತ್ತು ಭಾರತದ ಪರಿಸ್ತಿತಿ ಏನಾಗುತ್ತಿತ್ತು ಎನ್ನುವ ಅರಿವು ಬಿಎಂಆರ್ ಸಿಎಲ್ ಆಡಳಿತಕ್ಕೆ ಗೊತ್ತಿರಬೇಕಿತ್ತು. ಅಂಬೇಡ್ಕರ್ ಭಾವಚಿತ್ರ ಇಡದ ಅಪಮಾನ ಮಾಡಿರುವ ಬಿಎಂಆರ್ ಸಿಎಲ್ ಸಂಸ್ಥೆ ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಯಾಚಿಸಬೇಕು. ಎಂಡಿ ಮಹೇಶ್ವರ ರಾವ್ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು.ಇಷ್ಟೆಲ್ಲಕ್ಕೂ ಎಂದು ದಲಿತ ಮುಖಂಡರಾದ ಶಿವಕುಮಾರ ನಾಯ್ಕ ಮತ್ತು ಶಂಕರ್‌ ಅವರು ಒತ್ತಾಯಿಸಿದರು.

Related Articles

ಇತ್ತೀಚಿನ ಸುದ್ದಿಗಳು