Home ಬೆಂಗಳೂರು ʼಕರ್ನಾಟಕ ರಾಜ್ಯೋತ್ಸವʼ ಪ್ರಯುಕ್ತ ಬಿಬಿಎಂಪಿ ವತಿಯಿಂದ ಕ್ಷಯರೋಗಿಗಳಿಗೆ ಆಹಾರ ಕಿಟ್‌ ವಿತರಣೆ

ʼಕರ್ನಾಟಕ ರಾಜ್ಯೋತ್ಸವʼ ಪ್ರಯುಕ್ತ ಬಿಬಿಎಂಪಿ ವತಿಯಿಂದ ಕ್ಷಯರೋಗಿಗಳಿಗೆ ಆಹಾರ ಕಿಟ್‌ ವಿತರಣೆ

0

ಬೆಂಗಳೂರು: ʼ67ನೇ ಕರ್ನಾಟಕ ರಾಜ್ಯೋತ್ಸವ”ದ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಛೇರಿ ಆವರಣದಲ್ಲಿ ಇಂದು ಮಾನ್ಯ ಆಡಳಿತಗಾರರಾದ ರಾಕೇಶ್ ಸಿಂಗ್ ಹಾಗೂ ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಧ್ವಜಾರೋಹಣ ನೆರವೇರಿಸಿದರು.

ಬಿಬಿಎಂಪಿ ಅಧಿಕಾರಿಗಳು ಧ್ವಜರೋಹಣ ಮಾಡುತ್ತಿರುವ ದೃಶ್ಯ

ಕ್ಷಯ ರೋಗ ಹೊಂದಿರುವ 200 ಮಂದಿಗೆ ಆಹಾರ ಕಿಟ್ ವಿತರಣೆ

ಪ್ರಧಾನ ಮಂತ್ರಿಯವರ ಕ್ಷಯ ಮುಕ್ತ ಭಾರತ ಅಭಿಯಾನದ ಅಂಗವಾಗಿ, ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘದ ವತಿಯಿಂದ 200 ಮಂದಿ ಕ್ಷಯ ರೋಗಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.

ಲಿಂಕ್ ವರ್ಕರ್ ಕುಟುಂಬದವರಿಗೆ 1 ಲಕ್ಷ ರೂ. ಸಹಾಯಧನ

ಬಿಬಿಎಂಪಿಯಲ್ಲಿ ಲಿಂಕ್ ವರ್ಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಪಾರ್ವತಿಯವರು ಹೃದಯಾಘಾತದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಸಂಘದ ವತಿಯಿಂದ ಅವರ ಕುಟುಂಬಕ್ಕೆ 1 ಲಕ್ಷ ರೂ. ಸಹಾಯಧನ ನೀಡಲಾಯಿತು.

ಈ ವೇಳೆ ವಿಶೇಷ ಆಯುಕ್ತರುಗಳಾದ ಡಾ.ಹರೀಶ್ ಕುಮಾರ್, ಪಿ.ಎನ್.ರವೀಂದ್ರ, ಎಸ್.ರಂಗಪ್ಪ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

You cannot copy content of this page

Exit mobile version