ಬಿಜೆಪಿ ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿದೆ. ಕಾಂಗ್ರೆಸ್ ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದೆ. ಇದೇ ಎರಡೂ ಪಕ್ಷಕ್ಕೂ ಇರುವ ವ್ಯತ್ಯಾಸ: ಸಿಎಂ
ಬೆಂಗಳೂರು ನ 26: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. RSS ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ ಎಂದು ವ್ಯಂಗ್ಯವಾಡಿದರು.
ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ ಎಂದು ಸಿಎಂ ತಿಳಿಸಿದರು. RSS ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ.ಪೇಜಾವರ ಶ್ರೀಗಳು ಸಂವಿಧಾನ ಬಗ್ಗೆ ಆಡಿದ ಮಾತನ್ನು ಪ್ರಸ್ತಾಪಿಸಿದ ಸಿಎಂ, ಆ ರೀತಿ ಹೇಳುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.
ಭಾಷಣದ ಇತರೆ ಹೈಲೈಟ್ಸ್…
ಇಡೀ ದೇಶದ ಪಾಲಿಗೆ ಇಂದು ಸಂವಿಧಾನ ದಿನ
ಬಸವಣ್ಣನವರು 850 ವರ್ಷಗಳ ಹಿಂದೆ ಜಾತಿ ವ್ಯವಸ್ಥೆಯನ್ನು, ಜಾತಿ ಅಸಮಾನತೆಯನ್ನು ವಿರೋಧಿಸಿದ್ದರು. ಆದರೆ ಇವತ್ತಿಗೂ ಜಾತಿ ವ್ಯವಸ್ಥೆ ಹೋಗಿಲ್ಲ
ಬಾಯಲ್ಲಿ ಬಸವಾದಿ ಶರಣರ ವಚನ ಹೇಳೋದು. ಆಮೇಲೆ, ನೀನು ಯಾವ ಜಾತಿ ಅಂತ ಕೇಳ್ತಾರೆ. ಈಗಲೂ ಇವನಾರವ, ಇವನಾರವ ಅಂತಲೇ ಕೇಳುತ್ತಿದ್ದಾರೆ ಹೊರತು, ಇವ ನಮ್ಮವ ಅಂತ ಹೇಳುತ್ತಲೇ ಇಲ್ಲ ಎಂದು ವ್ಯಂಗ್ಯವಾಡಿದರು
ಸಂವಿಧಾನದ ಧ್ಯೇಯೋದ್ದೇಶಗಳು ಎಷ್ಟರ ಮಟ್ಟಿಗೆ ಜಾರಿಯಾಗಿವೆ, ಏಕಿನ್ನೂ ಸಮಾನತೆಯ ಸಮಾಜ ನಿರ್ಮಾಣ ಆಗಿಲ್ಲ ಎನ್ನುವುದನ್ನು ಅವಲೋಕನ ಮಾಡಿಕೊಳ್ಳಬೇಕಿದೆ
ಸಂವಿಧಾನ ಜಾರಿ ಸಭೆಯಲ್ಲಿ ಅಂಬೇಡ್ಕರ್ ಅವರು ಆಡಿದ ಎಚ್ಚರಿಕೆಯ ಮಾತುಗಳನ್ನು ನಾವು ಮರೆಯಬಾರದು
ಪ್ರತಿಯೊಬ್ಬರಿಗೂ ಒಂದು ಓಟು, ಒಂದು ಮೌಲ್ಯ ಸಿಕ್ಕಿದೆ. ಆದರೆ ಎಲ್ಲರಿಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ನಾವು ವೈರುದ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆ ಹೋಗಲಾಡಿಸದಿದ್ದರೆ ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿ ಆಗಲ್ಲ ಎನ್ನುವ ಎಚ್ಚರಿಕೆ ನೀಡಿದ್ದರು
ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆತ್ಮ
ಅಂಬೇಡ್ಕರ್ ಅವರಿಗೆ ದೂರದೃಷ್ಟಿ ಇತ್ತು. ಆದ್ದರಿಂದಲೇ, ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇರಬೇಕು. ಕೆಟ್ಟವರ ಕೈಗೆ ಹೋದರೆ ಮೌಲ್ಯಗಳು ಸಾಯುತ್ತವೆ ಎಂದು ಎಚ್ಚರಿಸಿದ್ದರು
RSS ಬಿಜೆಪಿಯ ಮಾತೃಸಂಸ್ಥೆ. ಇದರ ಅಧ್ಯಕ್ಷನಾಗಿದ್ದ ಗೋಳ್ವಾಳ್ಕರ್ ಅಂಬೇಡ್ಕರ್ ಅವರ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು
ಬ್ರಿಟೀಷರ ಅವಧಿಯಲ್ಲೇ ಹುಟ್ಟಿದ RSS ಭಾರತದ ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸಲಿಲ್ಲ. ಈಗ ಈ RSS ದೇಶಭಕ್ತಿಯ ಪಾಠ ಮಾಡುತ್ತಿದೆ
RSS ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ
ಬಿಜೆಪಿ ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿದೆ. ಕಾಂಗ್ರೆಸ್ ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದೆ. ಇದೇ ಎರಡೂ ಪಕ್ಷಕ್ಕೂ ಇರುವ ವ್ಯತ್ಯಾಸ