Sunday, June 16, 2024

ಸತ್ಯ | ನ್ಯಾಯ |ಧರ್ಮ

ರಾಜಕಾರಣವನ್ನು ಫೀಲ್ಡ್ ನಲ್ಲಿ ಮಾಡಿ, ತನಿಖಾ ಸಂಸ್ಥೆಯ ಕಚೇರಿಯಲ್ಲಿ ಅಲ್ಲ : ಬಿಜೆಪಿ ವಿರುದ್ಧ ಡಿಕೆಶಿ ಗರಂ

ಇ.ಡಿ. ವಿಚಾರಣೆ ಒಂದು ಹಂತಕ್ಕೆ ಮುಕ್ತಾಯವಾಗಿದೆ. ಎರಡು ಮೂರು ದಿನಗಳಲ್ಲಿ ಕೆಲವು ದಾಖಲೆ ನೀಡುವಂತೆ ಕೇಳಿದ್ದಾರೆ. ನಾನು ಸಮಯಾವಕಾಶ ಕೋರಿದ್ದೇನೆ.ರಾಜಕಾರಣವನ್ನು ಫೀಲ್ಡ್ ನಲ್ಲಿ ಮಾಡಬೇಕೇ ಹೊರತು ತನಿಖಾ ಸಂಸ್ಥೆಯ ಕಚೇರಿಯಲ್ಲಿ ಅಲ್ಲ ಎಂದು ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಇಡಿ ವಿಚಾರಣೆ ಮುಗಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂದಿಳಿದ ಡಿಕೆ ಶಿವಕುಮಾರ್, ಯಂಗ್ ಇಂಡಿಯಾ ಸಂಸ್ಥೆಗೆ ಹಣ ನೀಡಿರುವ ಬಗ್ಗೆ ಅವರು ಮಾಹಿತಿ ಕೇಳಿದರು. ಜವಾಹರಲಾಲ್ ನೆಹರು ಹಾಗೂ ಗಾಂಧಿ ಅವರ ಕಾಲದಲ್ಲಿ ನಮ್ಮ ಮುಖಂಡರು ಮಾಡಿರುವ ಸಂಸ್ಥೆಗಳಿಗೆ ನಾವು ಹಣ ನೀಡಿದ್ದೇವೆ ಎಂದು ಹೇಳಿದ್ದೇವೆ. ಅವರು ನೀವು ಹಣ ಯಾಕೆ ಕೊಟ್ಟಿರಿ? ಹೇಗೆ ಕೊಟ್ಟಿರಿ? ಅದರ ಮೂಲ ಏನು ಎಂದು ಕೇಳಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರೆದು, ರಾಜಕಾರಣವನ್ನು ಫೀಲ್ಡ್ ನಲ್ಲಿ ಮಾಡಬೇಕೇ ಹೊರತು ತನಿಖಾ ಸಂಸ್ಥೆಯ ಕಚೇರಿಯಲ್ಲಿ ಅಲ್ಲ. ಭಾರತ ಜೋಡೋ ಪಾದಯಾತ್ರೆ ನಿಮಿತ್ತ ರಾಹುಲ್ ಗಾಂಧಿ ಅವರು ನಮ್ಮ ಭಾಗದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದರೂ ನಾನು ಇವತ್ತು ಯಾತ್ರೆಯಲ್ಲಿ ಭಾಗವಹಿಸಲು ಆಗಿಲ್ಲ. ಇವತ್ತೇ ಈ ವಿಚಾರಣೆ ಮಾಡುವ ಅಗತ್ಯ ಏನಿತ್ತು? ನಾನು ಅ. 23 ರ ನಂತರ ಯಾವುದೇ ದಿನ ವಿಚಾರಣೆಗೆ ಕರೆದರೂ ಬರುತ್ತೇನೆ ಎಂದು ಸಮಯ ಕೇಳಿದ್ದರೂ ಅವಕಾಶ ನೀಡಲಿಲ್ಲ. ಇವತ್ತೇ ಹಾಜರಾಗುವಂತೆ ಸೂಚಿಸಿದ್ದರು ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು