ಬೆಂಗಳೂರು: ಹಾಸನ ಜಿಲ್ಲೆಯ ಬಾಣವಾರದ ಬಳಿ ಸಂಭವಿಸಿರುವ ಹೃದಯವಿದ್ರಾವಕ ಅಪಘಾತದಲ್ಲಿ 9 ಮಂದಿ ಮೃತಪಟ್ಟಿರುವ ಸುದ್ದಿ ಆಘಾತ ತಂದಿದೆ. ಈ ಅಪಘಾತದಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿರುವುದು ಬಹಳ ನೋವು ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ, ಈ ಆಘಾತಕಾರಿ ನೋವು ಭರಿಸುವ ಶಕ್ತಿಯನ್ನು ಭಗವಂತ ಮೃತರ ಕುಟುಂಬ ಸದಸ್ಯರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದುಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.