ಚೆನ್ನೈ: ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರವನ್ನು ಡಿಎಂಕೆ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಗುರುವಾರ ಹೇಳಿದ್ದಾರೆ. ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಕೇಂದ್ರವು ಈ ಮಸೂದೆಯನ್ನು ಅಂಗೀಕರಿಸಿತು.
ಕೇಂದ್ರದ ಈ ಮಸೂದೆಯನ್ನು ಆತುರದಿಂದ ಅಂಗೀಕರಿಸಿರುವುದರ ವಿರುದ್ಧ ಡಿಎಂಕೆ ಸುಪ್ರೀಂ ಕೋರ್ಟ್ನಲ್ಲಿ ಮೊಕದ್ದಮೆ ಹೂಡಲಿದೆ ಎಂದು ಸ್ಟಾಲಿನ್ ಹೇಳಿದರು. ಅವರು ಇಂದು ಕಪ್ಪು ಬ್ಯಾಡ್ಜ್ ಧರಿಸಿ ವಿಧಾನಸಭೆಗೆ ಬಂದು ವಕ್ಫ್ ಮಸೂದೆಯನ್ನು ವಿರೋಧಿಸಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ, ಸಂವಿಧಾನದ ರಚನೆಯ ಮೇಲೆ ದಾಳಿ ನಡೆಸುತ್ತಿರುವ ಕೇಂದ್ರ ಸರ್ಕಾರವನ್ನು ಅವರು ತೀವ್ರವಾಗಿ ಟೀಕಿಸಿದರು.
ಈ ಮಸೂದೆಯ ಕುರಿತು ಮಾತನಾಡಿದ ಅವರು, ‘ಬಹುಪಾಲು ಪಕ್ಷಗಳು ಈ ಮಸೂದೆಯನ್ನು ವಿರೋಧಿಸಿದರೂ, ಕೇಂದ್ರವು ಗುರುವಾರ ಬೆಳಗಿನ ಜಾವ 2 ಗಂಟೆಗೆ ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಅನುಮೋದನೆ ಪಡೆಯಿತು. ಈ ವಿವಾದಾತ್ಮಕ ತಿದ್ದುಪಡಿಯ ವಿರುದ್ಧ ಡಿಎಂಕೆ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಲಿದೆ. ವಕ್ಫ್ ಮಂಡಳಿಯ ಸ್ವಾಯತ್ತತೆಯನ್ನು ನಾಶಪಡಿಸುವ ಮತ್ತು ಅಲ್ಪಸಂಖ್ಯಾತ ಜನಸಂಖ್ಯೆಗೆ ಬೆದರಿಕೆ ಒಡ್ಡುವ ಕೇಂದ್ರ ಸರ್ಕಾರದ ಕಾನೂನಿನ ವಿರುದ್ಧ ತಮಿಳುನಾಡು ಹೋರಾಡಲಿದೆʼ ಎಂದು ಅವರು ಹೇಳಿದರು.