ಬೇಲೂರು ಜೆ.ಎಂ.ಎಫ್.ಸಿ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ನ್ಯಾಯಾಲಯದ ಉದ್ಘಾಟನಾ
ಬೇಲೂರು : ಬೇಲೂರಿನ ಜೆಎಂಎಫ್ಸಿ ನ್ಯಾಯಾಲಯ ಪಟ್ಟಣದ ಹೊರವಲಯ ದಲ್ಲಿರುವ ಕಾರಣದಿಂದ ಜನಸಾಮಾನ್ಯರಿಗೆ ಸ್ಪಂದಿಸಲು ಸಾದ್ಯವಿಲ್ಲದ ನಿಟ್ಟಿನಲ್ಲಿ ತಾಲ್ಲೂಕು ಕಚೇರಿಯ ಆಸುಪಾಸಿನಲ್ಲಿ ನ್ಯಾಯಾಲಯ ನಿರ್ಮಿಸುವುದು ಸೂಕ್ತವೆಂದು ಕರ್ನಾಟಕ ಉಚ್ಚ ನ್ಯಾಯಾ ಲಯದ ನ್ಯಾಯಮೂರ್ತಿಗಳು ಹಾಗೂ ಹಾಸನ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಹೆಚ್.ಟಿ.ನರೇಂದ್ರ ಪ್ರಸಾದ್ ಹೇಳಿದರು.
ಪಟ್ಟಣದ ಹೊರವಲಯ ದಲ್ಲಿನ ಜೆಎಂಎಸಫ್ಸಿ ನ್ಯಾಯಾಲಯ ಅವರಣದಲ್ಲಿ ಜಿಲ್ಲಾ ನ್ಯಾಯಾಂಗ, ಹಾಸನ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಉದ್ಘಾಟನೆ ನಡೆಸಿ ಮಾತನಾಡಿದ ಅವರು ಇದೇ ನ್ಯಾಯಾಲಯದಲ್ಲಿ ಆರು ಸಾವಿರಕ್ಕೂ ಅಧಿಕ ಪ್ರಕರಣಗಳಿವೆ ಎಂಬ ಹಿನ್ನಲೆಯಲ್ಲಿ ಹೆಚ್ಚುವರಿ ನ್ಯಾಯಾಲಯ ನೀಡಲಾಗಿದೆ. ಇನ್ನು ಮುಂದೆ ವಕೀಲರು ಜವಾಬ್ದಾರಿ ಜಾಸ್ತಿ ಇದೆ. ಕಕ್ಷಿದಾರ ವಿನಾಃಕಾರಣ ಅಲೆಯುವ ಪರಿಸ್ಥಿತಿ ನಿರ್ಮಿಸಬೇಡಿ, ನ್ಯಾಯಾಲಯದಲ್ಲಿ ಕನಿಷ್ಟ ಒಂದು ಸುಜ್ಜಿತ ಸಭಾಂಗಣ ಇರಲಿ, ಇಂದು ಕಟ್ಟಡ ಮೂಲೆಯಲ್ಲಿ ಸಮಾರಂಭ ಅಯೋಜಿಸಿದ್ದು ತೃಪ್ತಿ ತಂದಿಲ್ಲ, ಸ್ಥಳೀಯ ಶಾಸಕರ ಸಹಕಾರ ಪಡೆದು ಶೀಘ್ರವೇ ವಕೀಲರ ಭವನ, ಗ್ರಂಥಾಲಯ, ಸಭಾಂಗಣ, ವಸತಿಗೃಹಕ್ಕೆ ಪ್ರಸ್ತಾವನೆ ಕಳಿಸಿ, ಎಂದವರು ಇತ್ತೀಚಿನ ದಿನಗಳಲ್ಲಿ ನ್ಯಾಯಾಂಗ ಇಲಾಖೆಗೆ ಇತ್ತೀಚಿಗೆ ಹೆಣ್ಣು ಮಕ್ಕಳು ಬರುತ್ತಿರುವುದು ಸಂತಸದ ವಿಷಯವೆಂದರು. ಅಲ್ಲದೆ ಪ್ರತಿ ಮೂರು ತಿಂಗಳಿಗೊಮ್ಮೆ ಕಾರ್ಯಗಾರವನ್ನ ಏರ್ಪಡಿಸು ವುದರಿಂದ ಯುವ ವಕೀಲರಿಗೆ ಹೆಚ್ಚಿನ ಕಾನೂನಿನ ಅರಿವು ತಿಳಿಯುತ್ತದೆ ಅಲ್ಲದೆ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಒಂದು ವಕೀಲರ ಭವನವನ್ನು ನಿರ್ಮಾಣ ಮಾಡುವುದಾದರೆ ನಮ್ಮ ಸಹಕಾರ ಹೆಚ್ಚಿನ ರೀತಿಯಲ್ಲಿ ನಡೆಯುವುದಾಗಿ ಭರವಸೆ ನೀಡಿದರು.
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹೆಚ್.ಪಿ,ಸಂದೇಶ್ ಮಾತನಾಡಿ, ನ್ಯಾಯಾಲಯದಲ್ಲಿನ ನ್ಯಾಯಾಧೀಶರು, ವಕೀಲರು ಮತ್ತು ಸಿಬ್ಬಂದಿಗಳು ಮೊದಲು ಕಕ್ಷಿದಾರರನ್ನು ಅನ್ನದಾತರು ಎಂದು ಗೌರವಿಸಿದರೆ ಮಾತ್ರ ನ್ಯಾಯಾಂಗ ಇಲಾಖೆಯ ಘನತೆ ಉಳಿಯುತ್ತದೆ. ನಿಮ್ಮ ಬಳಿ ಬರುವಂತಹ ನೊಂದವರಿಗೆ ಮತ್ತೆ ಮತ್ತೆ ಅಲೆಯುವ ಸ್ಥಿತಿಮಾಡಬೇಡಿ, ಆದಷ್ಟು ಕಡಿಮೆ ಶುಲ್ಕದಲ್ಲಿ ಅವರಿಗೆ ಎಲ್ಲಾ ರೀತಿಯ ಸಹಾಯವನ್ನು ನೀಡಿದಾಗ ಮಾತ್ರ ಅವರ ಬೆವರಿಗೆ ಬೆಲೆ ಬರುತ್ತದೆ. .ಮಲೆನಾಡು ಭಾಗದ ವಕೀಲರು ಬೆಳಿಗ್ಗೆ ಲಾಯರ್ ಮಧ್ಯಾಹ್ನ ತೋಟ ಎನ್ನುವ ಬದಲು ಸಂಪೂರ್ಣ ನ್ಯಾಯಾಂಗದಲ್ಲಿ ತೊಡಗಿಸಿಕೊಂಡು ನ್ಯಾಯ ನೀಡಿ, ವಕೀಲರಿಗೆ ತನ್ನದೆಯಾದ ಐತಿಹಾಸಿಕ ಹಿನ್ನಲೆಯಲ್ಲಿ ಸ್ವಾತಂತ್ರ್ಯ ಹೋರಾಟ ಮತ್ತು ಸಂವಿದಾನ ರಚನೆಯಲ್ಲಿ ವಕೀಲರು ಶ್ರಮಿಸಿದ ಬಗ್ಗೆ ತಿಳಿಯಿರಿ, ವಿಶ್ವಮಾನವ ಧರ್ಮ ಪಾಲಿಸುವ ನಿಟ್ಟಿನಲ್ಲಿ ಮುಂದಾಗಿ, ತಾವು ದುಡಿಯುವಂತಹ ದುಡಿಮೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವುದಕ್ಕೆ ಹೆಚ್ಚಿನ ಕಾಳಜಿ ವಹಿಸಿ ಆಸ್ತಿಗಳನ್ನು ಮಾಡಬೇಡಿ ಎಂದು ವಕೀಲರಿಗೆ ಕಿವಿ ಮಾತು ಹೇಳಿದ ಅವರು ಈಗಾಗಲೇ ಬೇಲೂರು ನ್ಯಾಯಾಲಯಕ್ಕೆ 7 ಎಕರೆ ಜಾಗ ಮೀಸಲಿಟ್ಟಿದ್ದು, ಮುಂದಿನ ದಿನದ ಭವಿಷ್ಯದ ದೃಷ್ಟಿಯಿಂದ ಉತ್ತಮ ಕಟ್ಟಡವಾಗಲಿ ಎಂದರು. ಅಲ್ಲದೆ ಶಾಸಕರ ಸಹಕಾರ ಪಡೆದು ಕೂಡಲೇ ವಕೀಲರ ಭವನವನ್ನು ನಿರ್ಮಾಣ ಮಾಡುವುದರ ಜೊತೆಗೆ ಎಲೆಕ್ಟ್ರಾನಿಕ್ ಲೈಬ್ರರಿಯನ್ನ ಮಾಡುವುದು ಅತಿ ಮುಖ್ಯ ಅಲ್ಲದೆ ಮುಂದಿನ ದಿನದಲ್ಲಿ ಲೋಕ ಅದಾಲತ್ ಬರುವುದರಿಂದ ನಿಮ್ಮ ಎಲ್ಲರ ಸಹಕಾರ ಅತಿ ಮುಖ್ಯ ಎಂದು ತಿಳಿಸಿದರು.