Home ಬ್ರೇಕಿಂಗ್ ಸುದ್ದಿ ‘ಯುವನಿಧಿ’ಗೆ ಮುಹೂರ್ತ ನಿಗದಿ : ನಿರುದ್ಯೋಗಿ ಪದವೀಧರರಿಗೆ ಮಾಸಿಕ ನೆರವಿಗೆ ಚಾಲನೆ

‘ಯುವನಿಧಿ’ಗೆ ಮುಹೂರ್ತ ನಿಗದಿ : ನಿರುದ್ಯೋಗಿ ಪದವೀಧರರಿಗೆ ಮಾಸಿಕ ನೆರವಿಗೆ ಚಾಲನೆ

0

ರಾಜ್ಯ ಸರ್ಕಾರದ ಗ್ಯಾರಂಟಿ ಅಂಶಗಳ ಕೊನೆಯ ಯೋಜನೆ, ಯುವನಿಧಿ ಯೋಜನೆಯ ( Yuvanidhi Scheme ) ನೋಂದಣಿ ಪ್ರಕ್ರಿಯೆ ಡಿ.26ಕ್ಕೆ ಮುಂದೂಡಿಕೆಯಾಗಿದೆ. ಡಿಸೆಂಬರ್ 26 ರಿಂದ ಯುವನಿಧಿ ಯೋಜನೆಗೆ ನೋಂದಣಿ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ತಿಳಿಸಿದ್ದಾರೆ.

ಈ ಬಗ್ಗೆ CM of Karnataka ಖಾತೆಯಿಂದ ಟ್ವಿಟ್ ಮೂಲಕ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು ಎಂದಿದ್ದಾರೆ.

ಹಾಗೆಯೇ ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ. ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ಡಿಪ್ಲೊಮಾ ಹೊಂದಿರುವವರಿಗೆ 1,500 ಆರ್ಥಿಕ ನೆರವು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ. 

ಈ ಮೂಲಕ ಅನುಷ್ಠಾನಗೊಂಡೇ ತೀರಬೇಕೆಂಬ ಐದೂ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿ ಯೋಜನೆಗೂ ಈಗ ರಾಜ್ಯ ಸರ್ಕಾರ ಕೈ ಇಟ್ಟಿದೆ.

You cannot copy content of this page

Exit mobile version