Monday, June 23, 2025

ಸತ್ಯ | ನ್ಯಾಯ |ಧರ್ಮ

ಆಗಸ್ಟ್ 18ರಿಂದ ಕರ್ನಾಟಕದ ಎಲ್ಲಾ ಸರ್ಕಾರಿ ಶಾಲೆ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ

ಶಿವಮೊಗ್ಗ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ಅಥವಾ ಬಾಳೆ ಹಣ್ಣು ನೀಡುವ ಯೋಜನೆಯು ಆಗಸ್ಟ್ 18ರಿಂದ ಆರಂಭವಾಗಲಿದೆ. ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯು ಉದ್ಘಾಟನೆಗೊಳ್ಳಲಿದೆ ಎಂದು ಪ್ರಾಥಮಿಕ ಹಾಗ ಪೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಪೋಷಕಾಂಶಯುಕ್ತ ಆಹಾರ ನೀಡುವ ಹಿನ್ನಲೆಯಲ್ಲಿ ಈ ಯೋಜನೆಯು ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ. ವಾರದಲ್ಲಿ ಎರಡು ಬಾರಿ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಿಸಲಾಗುವುದು ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗಾಗಿ ಬಾಳೆಹಣ್ಣನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಮೊದಲು 8ನೇ ತರಗತಿಯವರೆಗೆ ಈ ಯೋಜನೆ ಜಾರಿಗೊಳಿಸಬೇಕು ಎಂದಾಗಿತ್ತು. ಆದರೆ ಈಗ ಹತ್ತನೇ ತರಗತಿವರೆಗೂ ವಿಸ್ತರಿಸಬೇಕು ಎಂಬ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದ ವಿದ್ಯಾರ್ಥಿಗಳು ಅಪೌಷ್ಟಿಕತೆ ಹಾಗೂ ಅನೀಮಿಯಾದಿಂದ ಬಳಲುತ್ತಿರುವುದರಿಂದ ಮೊಟ್ಟೆ ಅಥವಾ ಬಾಳೆಹಣ್ಣು ವಿತರಣೆ ಅನಿವಾರ್ಯವಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page