Thursday, June 19, 2025

ಸತ್ಯ | ನ್ಯಾಯ |ಧರ್ಮ

‘ಜಾರಿ ನಿರ್ದೇಶನಾಲಯ’ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಎಂದು ಬದಲಾಯಿಸಿಕೊಳ್ಳಲಿ: ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು: ನಿನ್ನೆ ನಡೆದ ಕಾಂಗ್ರೆಸ್‌ ಸಂಸದರು ಹಾಗೂ ಶಾಸಕರ ಮೇಲಿನ ಇಡಿ ದಾಳಿಯನ್ನು ರಾಜ್ಯ ಸರ್ಕಾರದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಜಾರಿ ನಿರ್ದೇಶನಾಲಯ ತನ್ನ ಹೆಸರನ್ನು ಕಾಂಗ್ರೆಸ್‌ ವಿರೋಧಿ ನಿರ್ದೇಶನಾಲಯ ಎಂದು ಬದಲಾಯಿಸಿಕೊಳ್ಳುವುದು ಸೂಕ್ತ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯದ ವೈಶಿಷ್ಟ್ಯವೇನೆಂದರೆ ಅದು ದಾಳಿ ಮಾಡುವುದು ಬಿಜೆಪಿಯೇತರ ನಾಯಕರ ಮೇಲೆ ಮಾತ್ರ. ಇಲ್ಲಿಯವರೆಗೂ ED ಬಿಜೆಪಿ ನಾಯಕರ ತಂಟೆಗೆ ಹೋಗಿಲ್ಲ. ಹೋಗುವುದು ಇಲ್ಲ. ಇದೊಂದು ವಿಸ್ಮಯ.

ಕಾಂಗ್ರೆಸ್ ನಾಯಕರನ್ನೇ ನಿರ್ಧಿಷ್ಟವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸುವ ‘ಜಾರಿ ನಿರ್ದೇಶನಾಲಯ’ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಎಂದು ಬದಲಾಯಿಸಿಕೊಳ್ಳುವುದು ಸೂಕ್ತ. ಯಾಕೆಂದರೆ ಜಾರಿ ನಿರ್ದೇಶನಾಲಯದ ಪ್ರೈಮ್ ಟಾರ್ಗೆಟ್ ಕಾಂಗ್ರೆಸ್ ನಾಯಕರೆ‌ ಹೊರತು ಬಿಜೆಪಿಯವರಲ್ಲ.

ಇತ್ತೀಚೆಗಷ್ಟೆ ತಮಿಳುನಾಡಿನ TASMAC ಹಗರಣದಲ್ಲಿ ED ನಡೆಯನ್ನು ಸುಪ್ರೀಂ ಕೋರ್ಟ್ ಕಟು ಮಾತುಗಳಲ್ಲಿ ಟೀಕಿಸಿದೆ. ED ಎಲ್ಲಾ‌ ಮಿತಿಗಳನ್ನು ಮೀರುತ್ತಿದೆ ಎಂದು ಸುಪ್ರೀಂ ಎಚ್ಚರಿಕೆ ನೀಡಿದೆ. ಆದರೂ ED ಅಧಿಕಾರಿಗಳು BJP ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ.

ಸಾಂವಿಧಾನಿಕ ತನಿಖಾ ಸಂಸ್ಥೆಯಾದ EDಯನ್ನು ಮೋದಿ ಸರ್ಕಾರ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ED ರಾಜಕೀಯ ಪಕ್ಷವೊಂದರ ಆಜ್ಞಾಪಾಲಕರಾದರೆ ಆ ಸಂಸ್ಥೆಗೆ ಸಾಂವಿಧಾನಿಕ ಪಾವಿತ್ರ್ಯತೆ ಇರಲು ಹೇಗೆ ಸಾಧ್ಯ‌.? ಆ ಸಂಸ್ಥೆಯಿಂದ ಪ್ರಜಾಪ್ರಭುತ್ವದ ಮೌಲ್ಯ ಉಳಿಯಲು ಹೇಗೆ ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.

ಈ ದಾಳಿಯ ಕುರಿತು ಕಾಂಗ್ರೆಸ್‌ ಪಕ್ಷದ ಹಲವು ನಾಯಕರು ಈಗಾಗಲೇ ಪ್ರತಿಕ್ರಿಯಿಸಿದ್ದು, ಅವರೆಲ್ಲರೂ ಇದೊಂದು ಕಾಂಗ್ರೆಸ್‌ ಪಕ್ಷವನ್ನು ಗುರಿಯಾಗಿಸಿಕೊಂಡು ನಡೆಸಲಾದ ದಾಳಿ ಎಂದಿದ್ದಾರೆ.

ದಾಳಿಗೊಳಗಾದ ಭರತ್‌ ರೆಡ್ಡಿ ಇಡಿಯವರಿಗೆ ತಮ್ಮ ಮನೆಯಲ್ಲಿ ಒಂದು ಕಾಗದದ ಚೂರೂ ಸಿಕ್ಕಿಲ್ಲ ಎಂದಿದ್ದಾರೆ. ಅತ್ತ ಸಂಸದ ತುಕಾರಾಮ್‌ ಅವರು “ನಾನು ಈ ದಾಳಿಯನ್ನು ರಾಜಕೀಯ ಪ್ರೇರಿತ ಎನ್ನುವುದಿಲ್ಲ. ಇಡಿ ಕೇಳಿ ಕೇಳುವ ಎಲ್ಲಾ ದಾಖಲೆಗಳನ್ನು ನೀಡಿ ತನಿಖೆಗೆ ಸಹಕರಿಸುತ್ತೇನೆ” ಎಂದಿದ್ದಾರೆ.


Related Articles

ಇತ್ತೀಚಿನ ಸುದ್ದಿಗಳು

You cannot copy content of this page