Tuesday, June 10, 2025

ಸತ್ಯ | ನ್ಯಾಯ |ಧರ್ಮ

ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ: ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿ ಅಭಿವೃದ್ಧಿ ಹಾಗೂ ನಾವಿನ್ಯತೆಯ ಪಯಣ, ಇದಕ್ಕೆ ಕಾರಣವಾಗಿರುವ ಸಾಧಕರು, ಇವರ ಸಾಧನೆಗಳನ್ನು ಬಿಂಬಿಸುವ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ(Innovation Experience Museum) ವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರದಂದು ತಿಳಿಸಿದ್ದಾರೆ.

ಇಂದು  ಬೆಂಗಳೂರು ವಿನ್ಯಾಸಕಾರರ ಸಮುದಾಯದ ವತಿಯಿಂದ ಆಯೋಜಿಸಿದ್ದ ಬಿ.ಎಲ್.ಆರ್ ಡಿಸೈನ್ ವೀಕ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ ಬಗ್ಗೆ ಹೇಳಿದ್ದಾರೆ.

ರಾಜ್ಯದ ಎಲ್ಲ ನಾವಿನ್ಯತೆ, ಅವಿಷ್ಕಾರಗಳ ಬಗ್ಗೆ ಮಾಹಿತಿ ನೀಡುವ ಅಂತರರಾಷ್ಟ್ರೀಯ ಮಟ್ಟದ ಮ್ಯೂಸಿಯಂ ಇದಾಗಲಿದ್ದು, ಹಸಿರಿನ ಪರಿಸರವನ್ನೂ ಒಳಗೊಂಡಿರಲಿದೆ. ಇದರಿಂದ ವಿದೇಶಿ ಪ್ರವಾಸೋದ್ಯಮವನ್ನು ಪ್ರೋತ್ಸಾಹ ದೊರೆಯುತ್ತದೆ. ಈ ಮ್ಯೂಸಿಯಂ ನಿಂದ ಯುವ ಆವಿಷ್ಕಾರಿಗಳು, ವಿನ್ಯಾಸಕಾರರಿಗೆ ಸ್ಪೂರ್ತಿ ದೊರೆಯಲಿದೆ ಎಂದರು.

ಬೆಂಗಳೂರಿಗೆ 8 ನಗರ ಕೇಂದ್ರಗಳ ನಿರ್ಮಾಣ:

ವಿಶ್ವದ ಯಾವುದೇ ಸಣ್ಣ ನಗರದಲ್ಲಿ  ಒಂದು ನಗರ ಕೇಂದ್ರವಿರುವಂತೆ, ಬೆಂಗಳೂರಿನ 8 ದಿಕ್ಕುಗಳಲ್ಲಿ 8 ನಗರ ಕೇಂದ್ರಗಳ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಬೆಂಗಳೂರು ನಗರಕ್ಕೆ ಮಾತ್ರ ನಗರಕೇಂದ್ರವೆಂಬುದಿಲ್ಲ. ಆದ್ದರಿಂದ 8 ನಗರ ಕೇಂದ್ರಗಳನ್ನು ನಿರ್ಮಿಸಿ, ಇದಕ್ಕೆ ಪೂರಕವಾಗಿ ರಸ್ತೆ, ರೈಲುಗಳನ್ನು ಅಭಿವೃದ್ಧಿಗೊಳಿಸಬಹುದು. ಈ ಯೋಜನೆಗೆ ಬೇಕಾದ ಸಲಹೆಗಳನ್ನು ವಿನ್ಯಾಸಕಾರರಿಂದ ತಿಳಿದುಕೊಳ್ಳುವುದಾಗಿ ಬೊಮ್ಮಾಯಿಯವರು  ಹೇಳಿದ್ದಾರೆ.

ಈ ಸಂದರ್ಭದಲ್ಲಿ ಐ.ಟಿ. ಬಿ.ಟಿ, ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ್, ಸ್ಟಾರ್ಟ್ ಅಪ್ ವಿಷನ್ ಗುಂಪಿನ ಅಧ್ಯಕ್ಷ ಪ್ರಶಾಂತ್ ಭೂಷಣ್  ಮೊದಲಾದವರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page