Home ಜನ-ಗಣ-ಮನ ಇತಿಹಾಸ ದೇವೇಗೌಡ್ರು, ಕುಟುಂಬದ ಸಾಧನೆ ತಿಳಿಯಲು ಜಿಲ್ಲೆಯ ಪ್ರವಾಸ ಕೈಗೊಳ್ಳಲಿಶ್ರೇಯಸ್ ಪಟೇಲ್ ರಿಗೆ ಸವಾಲು ಹಾಕಿದ ಮಾಜಿ...

ದೇವೇಗೌಡ್ರು, ಕುಟುಂಬದ ಸಾಧನೆ ತಿಳಿಯಲು ಜಿಲ್ಲೆಯ ಪ್ರವಾಸ ಕೈಗೊಳ್ಳಲಿಶ್ರೇಯಸ್ ಪಟೇಲ್ ರಿಗೆ ಸವಾಲು ಹಾಕಿದ ಮಾಜಿ ಶಾಸಕ ಕೆ.ಎಸ್. ಲಿಂಗೇಶ್

0


ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಅವರ ಕುಟುಂಬದವರು ಏನು ಕೆಲಸ ಮಾಡಿದ್ದಾರೆ ಬಗ್ಗೆ ತಿಳಿಯಲು ಸಂಸದರು ಜಿಲ್ಲೆಯ ಪ್ರವಾಸ ಕೈಗೊಂಡು ಸಂಚಾರ ಮಾಡಿ ಎಲ್ಲೆಲ್ಲಿ ಏನು ಕೆಲಸ ಆಗಿದೆ ಪಟ್ಟಿ ಮಾಡಿಕೊಳ್ಳಲಿ. ಇವರು ಮಾಡಿದ ಅಭಿವೃದ್ಧಿ ಕೆಲಸವನ್ನು ಸಂಸದರಾದ ಶ್ರೇಯಸ್ ಪಟೇಲ್ ಅವರು ಕೂಡ ಮಾಡಿ ತೋರಿಸಲಿ ಎಂದು ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸವಾಲು ಹಾಕಿದರು.


ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಒಬ್ಬ ಯುವಕನಾಗಿ, ಸೌಮ್ಯ ಸ್ವಭಾವದವನಾಗಿ, ಮುಂದಿನ ದಿನಗಳಲ್ಲಿ ದೊಡ್ಡ ಲೀಡರ್ ಆಗಿ ಹಾಸನ ಜಿಲ್ಲೆಗೆಯಲ್ಲ, ರಾಜ್ಯಕ್ಕೆ ಪರಿಚಿತರಾಗಿ ಜಿಲ್ಲೆಯ ಕೀರ್ತಿ ಹೆಚ್ಚು ಮಾಡಲಿ. ನಮಗೆ ಸಂಸದರಾದ ಶ್ರೇಯಸ್ ಪಟೇಲ್ ಬಗ್ಗೆ ಬಹಳ ಗೌರವವಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಕುಟುಂಬದವರು ಏನು ಎಂದು ಕೆಲಸ ಮಾಡಿದ್ದಾರೆ ಎಂದು ಹೇಳುವುದಾದರೇ ಒಂದು ದಿನ ಬೇಕಾಗುತ್ತದೆ. ಶ್ರೇಯಸ್ ಪಟೇಲ್ ಅವರು ನಮ್ಮ ಜಿಲ್ಲೆಯ ಪ್ರವಾಸ ಕೈಗೊಂಡು ಸಂಚಾರ ಮಾಡಲಿ. ಎಲ್ಲೆಲ್ಲಿ ಏನೆನು ಕೆಲಸ ಆಗಿದೆ ಎಂಬುದನ್ನು ಪಟ್ಟಿ ಮಾಡಲಿ. ತಾತ ಹಾಗೂ ಶ್ರೀಕಂಠಯ್ಯ ಅವರ ಸಾಧನೆಯನ್ನು ಜಿಲ್ಲೆಯ ಜನ ಕಂಡಿದ್ದಾರೆ. ಹಳೇಬೀಡಿಗೆ ಯಗಚಿ ನೀರು ಹರಿಸುವುದಾಗಿ ಪುಟ್ಟಸ್ವಾಮಿಗೌಡ ಭರವಸೆ ನೀಡಿದರು ಆದರೆ ಮುಂದೆ ಏನಾಯಿತು ಎಂದು ಎಲ್ಲರಿಗೂ ತಿಳಿದಿದೆ. ಎಚ್ ಡಿ ಕುಮಾರಸ್ವಾಮಿ ಅವರ ಅವಧಿಯಲ್ಲಿ 130 ಕೋಟಿ ಯೋಜನೆಗೆ ಚಾಲನೆ ನೀಡಲಾಯಿತು. ಯಡಿಯೂರಪ್ಪ ಅವರು ಸಹ ಹಣ ಬಿಡುಗಡೆ ಮಾಡಿದರು ಎಂದರು. ಆರು ತಿಂಗಳ ಕುಮಾರಸ್ವಾಮಿಯವರ ಅಭಿವೃದ್ಧಿಯ ಬಗೆ ಮಾತನಾಡುವ ಶ್ರೇಯಸ್ ಪಟೇಲ್ ಅವರು ಇದುವರೆಗೂ ಏನು ಎಂಬುದನ್ನು ಗಮನಿಸಲಿ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದ್ದು, ಹೆಚ್ಚಿನ ಅನುದಾನ ತಂದು ಜಿಲ್ಲೆಯ ಅಭಿವೃದ್ಧಿ ಮಾಡಲಿ ಆಗ ಜನರು ಬೇಷ್ ಎನ್ನುತ್ತಾರೆ ಎಂದು ಸಲಹೆ ನೀಡಿದರು. ಕೆಲ ದಿನಗಳ ಹಿಂದೆ ನಡೆದ ಕಾಂಗ್ರೆಸ್ ಸಮಾವೇಶದ ಬಗ್ಗೆ ಜನರು ಈಗಲೆ ಪ್ರಶ್ನೆ ಮಾಡುತ್ತಿದ್ದಾರೆ. ಇದು ಅಧಿವೇಶನ ಮಾಡಿಲ್ಲ. ದೇವೇಗೌಡರ ಕುಟುಂಬವನ್ನು ಬಯ್ಯುವುದಕ್ಕೆ ಮಾಡಿರುವ ಅಧಿವೇಶನವಾಗಿದೆ ಎನ್ನುತ್ತಿದ್ದಾರೆ. ಇಷ್ಟು ದೊಡ್ಡ ಸಮಾವೇಶ ಮಾಡಿ ಕನಿಷ್ಠ ನೂರು ಕೋಟಿ ಅನುಧಾನ ಬಿಡುಗಡೆ ಮಾಡಿಸಿದ್ದರೇ ಬಹಳ ಸಂತೋಷವಾಗುತಿತ್ತು. ಒಂದು ಕಡೆ ಗ್ಯಾರಂಟಿ ತಂದು ಅರ್ಧಬರ್ಧವಾಗಿ ಎಲ್ಲಾ ಅಭಿವೃದ್ಧಿ ಶೂನ್ಯವಾಗಿ ಜನರು ಬಯ್ಯುವ ಕಾಲದಲ್ಲಿ ಅನುಧಾನ ತಂದು ಅದನ್ನಾದರೂ ಪೋಕಸ್ ಮಾಡಬಹುದಿತ್ತು ಎಂದು ಕುಟುಕಿದರು. ಎಚ್ ಡಿ ಕುಮಾರಸ್ವಾಮಿ ಅವರ ಅವಧಿಯಲ್ಲಿ 130 ಕೋಟಿ ರಣಘಟ ್ಟ ಯೋಜನೆಗೆ ಚಾಲನೆ ನೀಡಲಾಯಿತು ಯಡಿಯೂರಪ್ಪ ಅವರು ಸಹ ಹಣ ಬಿಡುಗಡೆ ಮಾಡಿದರು ಎಂದರು. ಆರು ತಿಂಗಳ ಕುಮಾರಸ್ವಾಮಿಯವರ ಅಭಿವೃದ್ಧಿಯ ಬಗೆ ಮಾತನಾಡುವ ಶ್ರೇಯಸ್ ಪಟೇಲ್ ಅವರು ಇದುವರೆಗೂ ಏನು ಮಾಡಿದ್ದಾರೆ ಎಂಬುದನ್ನು ಗಮನಿಸಲಿ. ಕುಮಾರಸ್ವಾಮಿಯವರು ದೇಶದಲ್ಲಿ ನಿಂತು ಹೋಗಿದ್ದ ಅನೇಕ ಕೈಗಾರಿಕೆಗಳನ್ನು ಮರು ಸ್ಥಾಪಿಸಲು ಪ್ರಯತ್ನ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಸಾಧನೆ ಶೂನ್ಯ ಎಂದು ಹೇಳುತ್ತಿದ್ದೀರಾ, ಕಳೆದ ಆರು ತಿಂಗಳಲ್ಲಿ ದೇಶದಾಧ್ಯಂತ ತಿರುಗಿದ್ದಾರೆ. ಮುಚ್ಚಿ ಹೋಗುತ್ತಿದ್ದಂತಹ ಖಾಸಗೀಯವರು ಕಬಳಿಸುತ್ತಿದ್ದ ಆಂದ್ರದ ವಿಶಾಖಪಟ್ಟಣ, ಭದ್ರವತಿಯ ಕಬ್ಬಿಣದ ಕಾರ್ಖಾನೆ, ಹೆಚ್.ಎಂ.ಟಿ. ಕುದುರೆಮುಖ ಭೇಟಿ ಮಾಡಿ ಉಳಿಸಲು ಪುನರುಜ್ಜೀವನಗೊಳಿಸಲು 1.35 ಲಕ್ಷ ಕೋಟಿ ರೂ ವೆಚ್ಚದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಕೆಲಸ ಮಾಡಿದ್ದಾರೆ. ದೇವೇಗೌಡರು ಪ್ರಧಾನಿ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆದಂತಹ ವೇಳೆ ರೇವಣ್ಣನವರ ಶಕ್ತಿಯಿಂದ ಕೆ.ಎಂ.ಎಫ್. ಅಭಿವೃದ್ಧಿಯಾಗಿದ್ದರಿಂದ ಬಡವರು ಕೂಲಿಗೆ ಹೋಗದಂತೆ ಬದುಕುವ ಕೆಲಸ ಮಾಡಿದ್ದಾರೆ. ಇಂತಹ ಒಂದು ಕೆಲಸ ಮಾಡಿ ತೋರಿಸಿ ಪಟೇಲ್ರೆ ಎಂದು ಸವಾಲು ಹಾಕಿದರು.
ಹಾಸನಾಂಬೆ ದೇವಾಲಯದ ಜಾತ್ರೆ ವೇಳೆ ಮದುಗಿರಿ ಮತ್ತು ಅರಸೀಕೆರೆ ಕಡೆಯಿಂದ ಬಸ್ ಟಿಕೆಟ್ ಹಂಚುವಾಗೆ ವಿತರಣೆ ಮಾಡಿರುವ ಬಗ್ಗೆ ಜನರು ಮಾತನಾಡಿದ್ದಾರೆ. ಈ ವೇಳೆ ಸಂಸದರು ಏಕೆ ಪ್ರಶ್ನೆ ಮಾಡಲಿಲ್ಲ ಎಂದು ಗುಡುಗಿದರು. ಸಂಸದರಾಗಿ ಶ್ರೇಯಸ್ ಪಟೇಲ್ ಪ್ರಮುಖವಾಗಿ ಜಿಲ್ಲೆಗೆ ಅಂತರಾಷ್ಟಿçÃಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಶ್ರಮವಹಿಸಬೇಕು. ಸಾಕ್ಷಿಗುಡ್ಡೆಗಳನ್ನು ಕಣ್ಣ ಮುಂದೆ ಇಟ್ಟುಕೊಂಡು ಜೆಡಿಎಸ್ ಕೊಡುಗೆ ಏನು ಎಂಬುದನ್ನು ಪ್ರಶ್ನೆ ಮಾಡುವ ಶ್ರೇಯಸ್ ಪಟೇಲ್ ಅಧಿವೇಶನದಲ್ಲಿ ಯಾವ ವಿಚಾರ ಪ್ರಸ್ತಾಪ ಮಾಡಿದ್ದಾರೆ, ಕೇಂದ್ರ ಸಚಿವರು ಹಾಸನಕ್ಕೆ ಬಂದಾಗ ಅವರಿಗೆ ಮನವಿ ಮಾಡುವ ಬದಲಾಗಿ ಅವರ ವಿರುದ್ಧವೇ ಮಾತನಾಡುವ ಮೂಲಕ ಆಗುವ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಸಿಡಿ ಬಗ್ಗೆ ಮಾತನಾಡುವ ಸಂಸದರು ಸಿಡಿ ಬಿಡುಗಡೆ ಮಾಡಿ ಜಿಲ್ಲೆಯ ಗೌರವವನ್ನು ಬೀದಿ ಪಾಲು ಮಾಡಿದವರ ಜೊತೆಗೆ ಊಟ ಮಾಡುವ ಕೆಲಸ ಮಾಡುತ್ತಿದ್ದಾರೆ ಹಾಗಾದರೆ ಕುತಂತ್ರ ಯಾರದ್ದು ಎಂಬ ಬಗ್ಗೆ ಜನ ಯೋಚಿಸಬೇಕಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಎಸ್. ದ್ಯಾವೇಗೌಡ, ಪಕ್ಷದ ಮಾಧ್ಯಮ ವಕ್ತಾರ ಹೊಂಗೇರೆ ರಘು, ಎಚ್ ಡಿ ಸಿ ಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಹೊನ್ನವಳ್ಳಿ ಸತೀಶ್, ಆಲೂರು ತಾಲೂಕು ಅಧ್ಯಕ್ಷ ಮಂಜೇಗೌಡ ಇತರರು ಉಪಸ್ಥಿತರಿದ್ದರು.

You cannot copy content of this page

Exit mobile version