ಬಳ್ಳಾರಿ: ಕೆಲವು ದಿನಗಳ ಹಿಂದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಾಗಿರು ಘಟನೆ ಕುರಿತು ಸ್ಪೋಟಕ ಹೇಳಿಕೆ ನೀಡಿರುವ ಆಸ್ಪತ್ರೆಯ ನಿರ್ದೇಶಕ ಡಾ. ಗಂಗಾಧರ ಗೌಡ ಆಸ್ಪತ್ರೆಯಲ್ಲಿ ಉದ್ದೇಶಪೂರ್ವಕವಾಗಿ ಕರೆಂಟ್ ಕಟ್ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಉದ್ದೇಶ ಪೂರ್ವಕವಾಗಿ ವಿದ್ಯತ್ ಕಟ್ ಮಾಡಿದ್ದು, ನನ್ನ ಹೆಸರು ಕೆಡಿಸಲು ಸಂಚು ಮಾಡಿದ್ದಾರೆ. ಈ ಕುರಿತು ನನ್ನ ಜೊತೆ ಮಾತನಾಡಿದ್ದವರ ಆಡಿಯೋ ಸಂಗ್ರಹಿಸಿದ್ದೇನೆ ಎಂದು ಹೇಳಿದ್ದಾರೆ.
ಘಟನೆ ನಡೆದ ದಿನ ಸತ್ತವರ ಶವವಿಟ್ಟು ಧರಣಿಗೆ ಪ್ಲಾನ್ ಮಾಡಿದ್ದರು, ಹಾಗಗಿ ಈ ಷಡ್ಯಂತ್ರ ಮಾಡಿದವರ ವಿರುದ್ಧ ದೂರು ನೀಡಿ ಎಫ್ಐಆರ್ ದಾಖಲಿಸಿ ಕಾನೂನು ಹೋರಾಟ ಮಾಡುತ್ತೇನೆ ಎಂದು ಡಾ. ಗಂಗಾಧರ ಗೌಡ ಅವರು ಹೇಳಿಕೆ ನೀಡಿದ್ದಾರೆ.