ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಸಿಕ್ಕಿದ್ದ ಜಾಮೀನು ಜುಲೈ 24 ರ ವರೆಗೂ ವಿಸ್ತರಣೆ ಆಗಿದೆ.
ತಿಹಾರ್ ಜೈಲಿನಲ್ಲಿ ಇದ್ದ ಸತ್ಯೇಂದ್ರ ಜೈನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಇವರಿಗೆ 6 ವಾರಗಳ ಕಾಲ (ಜುಲೈ 14 ರ ವರೆಗೆ) ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಈ ವೇಳೆಯಲ್ಲಿ ಅವರು ತಮ್ಮ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ಮಾಡಲು ಅನುಮತಿ ನೀಡಲಾಗಿದೆ. ಜಾಮೀನು ಅರ್ಜಿ ವಿಸ್ತರಣೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿ ಜುಲೈ 24 ರ ವರೆಗೂ ಜಾಮೀನು ಅವಧಿಯನ್ನು ವಿಸ್ತರಿಸಿದೆ.