Thursday, July 4, 2024

ಸತ್ಯ | ನ್ಯಾಯ |ಧರ್ಮ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜುಲೈ 18 ರ ವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಿಸಿ ಇದೀಗ ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಾಲಯ ಪರಪ್ಪನ ಅಗ್ರಹಾರ ಹಾಗೂ ತುಮಕೂರಿನ ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗಳ ಮೂಲಕ ಮಾತನಾಡಲಾಯ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ, ನಟ ದರ್ಶನ್, ಪವಿತ್ರಗೌಡ ಮತ್ತು ಇತರರನ್ನು ಆರ್ಥಿಕ ಅಪರಾಧಗಳ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು.

ಇಂದು ನ್ಯಾಯಾಲಯದ ಮುಂದೆ ಆರೋಪಗಳನ್ನು ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ, ನಟ ದರ್ಶನ್ ಪವಿತ್ರ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನು ವಿಸ್ತರಿಸಿದ ಕೋರ್ಟ್ ಜುಲೈ 18ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು