Sunday, March 1, 2026

ಸತ್ಯ | ನ್ಯಾಯ |ಧರ್ಮ

ಆತಂಕಕ್ಕೆ ಒಳಗಾಗದೆ ಧೈರ್ಯವಾಗಿ ಪರೀಕ್ಷೆ ಎದುರಿಸಿ – ಸಂಸದ ಶ್ರೇಯಸ್ ಪಟೇಲ್

ಹಾಸನ: ಜಿಲ್ಲೆಯಾದ್ಯಂತ ಶನಿವಾರದಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಿದ್ದು, ನಗರದ ಗಂಧದ ಕೋಠಿಯಲ್ಲಿರುವ ಬಾಲಕಿಯರ ವಿಭಜಿತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಸಂಸದ ಶ್ರೇಯಸ್ ಎಂ.ಪಟೇಲ್ ಭೇಟಿ ನೀಡಿ ಪರೀಕ್ಷಾರ್ಥಿಗಳಿಗೆ ಶುಭಾಶಯ ಕೋರಿದರು.

ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಸಂಸದರು ಪರೀಕ್ಷಾ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿನಿಯರೊಂದಿಗೆ ಮಾತುಕತೆ ನಡೆಸಿ, ಪರೀಕ್ಷೆಗೆ ಮಾಡಿಕೊಂಡಿರುವ ಸಿದ್ಧತೆ ಕುರಿತು ವಿಚಾರಿಸಿದರು. ಯಾವುದೇ ಆತಂಕಕ್ಕೆ ಒಳಗಾಗದೆ ಧೈರ್ಯವಾಗಿ ಪ್ರಶ್ನೆಪತ್ರಿಕೆಯನ್ನು ಸಂಪೂರ್ಣವಾಗಿ ಓದಿ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಸಲಹೆ ನೀಡಿದರು. ಹೆಚ್ಚಿನ ಅಂಕಗಳನ್ನು ಗಳಿಸಿ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.

ಇದೇ ವೇಳೆ ಪರೀಕ್ಷಾ ಕೇಂದ್ರದಲ್ಲಿ ನಿಯೋಜನೆಗೊಂಡಿದ್ದ ಆರೋಗ್ಯ ಸಹಾಯಕಿಯರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ತರಲಾಗಿರುವ ಔಷಧಿಗಳ ಕುರಿತು ಪರಿಶೀಲನೆ ನಡೆಸಿದರು. ಅಗತ್ಯವಿದ್ದಲ್ಲಿ ಗ್ಲೂಕೋಸ್ ಪೌಡರ್ ಸಹ ಸಿದ್ಧವಾಗಿರಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಾಧರ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page