Saturday, June 15, 2024

ಸತ್ಯ | ನ್ಯಾಯ |ಧರ್ಮ

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಜಾಲ : ಬಿಜೆಪಿ ಘಟಾನುಘಟಿಗಳೇ ಇಲ್ಲಿ ಖದೀಮರು.!

ಇತ್ತೀಚೆಗಷ್ಟೆ ರಾಜ್ಯದಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ಜಾಲದ ಬಗ್ಗೆ ಸುದ್ದಿ ಆದ ಬೆನ್ನಲ್ಲೇ ಈಗ ಆ ಜಾಲದ ಕಿಂಗ್ ಪಿನ್ ಗಳನ್ನು ಕರ್ನಾಟಕ ಅಧಿಕಾರಿಗಳು ಪತ್ತೆ ಹಚ್ಚಿ ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿಗಳು ಹೈದರಾಬಾದ್ ಬಿಜೆಪಿ ಪಕ್ಷದ ಘಟಾನುಘಟಿ ನಾಯಕರುಗಳು ಎಂದು ತಿಳಿದು ಬಂದಿದೆ.

ಹೈದರಾಬಾದ್​ನಲ್ಲಿ ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕಾರ್ಖಾನೆ ನಡೆಸುತ್ತಿದ್ದ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿತ ಜೈನ್​ಗಳಿಬ್ಬರೂ ಬಿಜೆಪಿಯ ಸಕ್ರಿಯ ನಾಯಕರು, ಕಾರ್ಯಕರ್ತರು ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದರು.


ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ನಕಲಿ ಮೈಸೂರು ಸ್ಯಾಂಡಲ್ ಸೋಪ್ ಜಾಲ ಸಿಕ್ಕಿಬಿದ್ದ ಸಂಗತಿಯನ್ನು ವಿವರಿಸಿದ್ದಾರೆ. “ಸಚಿವ ಎಂಬಿ ಪಾಟೀಲ್ ಅವರಿಗೆ ಅನಾಮಿಕನೊಬ್ಬ ಕರೆ ಮಾಡಿ, ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ಮಾರಾಟದ ಬಗ್ಗೆ ಮಾಹಿತಿ ನೀಡುತ್ತಾನೆ. ಇದನ್ನು ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟದ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡುತ್ತಾರೆ. ನಂತರ ಅಧಿಕಾರಿಗಳು ನಕಲಿ ಸೋಪ್ ತಯಾರಿಕೆ ಮತ್ತು ಮಾರಾಟ ಜಾಲ ಪತ್ತೆ ಹಚ್ಚಲು ಮುಂದಾದರು ಎಂದು ತಿಳಿಸಿದರು.

ನಂತರ ಹೈದರಾಬಾದ್​ಗೆ ತೆರಳಿದ ಅಧಿಕಾರಿಗಳು 25 ಲಕ್ಷ ರೂ. ಆರ್ಡರ್ ಇದೆ, ಬಹಳ ದೊಡ್ಡ ಆರ್ಡರ್ ಇರುವುದರಿಂದ ಕಾರ್ಖಾನೆಗೆ ಬರುತ್ತೇವೆ ಎಂದು ಹೇಳುತ್ತಾರೆ. ನಂತರ ಸಿಕ್ಕ ಸೋಪುಗಳ ಮಾದರಿಯನ್ನು ಪರಿಶೀಲಿಸಿ, ನಕಲಿ ಎಂದು ಖಚಿತವಾಗುತ್ತಿದ್ದಂತೆ ಅಧಿಕಾರಿಗಳು ಕಾರ್ಖಾನೆ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ನಕಲಿ ಸೋಪ್​ ಮತ್ತು ಕವರ್​ಗಳು ಪತ್ತೆಯಾಗಿವೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಪ್ರಕರಣದ ಸಂಬಂಧ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್ಐಆರ್ ದಾಖಲಾಗಿದೆ. ಇವರಿಬ್ಬರೂ ಸ್ಥಳೀಯ ಘಟಾನುಘಟಿ ಬಿಜೆಪಿ ನಾಯಕರು, ಇವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಬಿಜೆಪಿ ರಾಜಕಾರಣಿ ರಾಜಾ ಸಿಂಗ್ ನಿಕಟ ಸಂಪರ್ಕ ಇದೆ ಎಂದು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ ಬಿಜೆಪಿ ಪರಾಜಿತ ಅಭ್ಯರ್ಥಿಯಾದ ಮಣಿಕಂಠ ರಾಥೋಡ್ ಕೂಡಾ ಇವರ ಸಂಪರ್ಕದಲ್ಲಿ ಇರುವುದು ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು