Home ಬ್ರೇಕಿಂಗ್ ಸುದ್ದಿ ‘ಕುಡ್ಲ ರ್‍ಯಾಂಪೇಜ್‌’ನ ಅಜಯ್ ಅಂಚನ್ ಮತ್ತಿತರರ ಮೇಲೆ ಧರ್ಮಸ್ಥಳದಲ್ಲಿ ‘ಹೆಗ್ಗಡೆ’ ಬೆಂಬಲಿಗ ಗೂಂಡಾಗಳಿಂದ ಮಾರಣಾಂತಿಕ ಹಲ್ಲೆ

‘ಕುಡ್ಲ ರ್‍ಯಾಂಪೇಜ್‌’ನ ಅಜಯ್ ಅಂಚನ್ ಮತ್ತಿತರರ ಮೇಲೆ ಧರ್ಮಸ್ಥಳದಲ್ಲಿ ‘ಹೆಗ್ಗಡೆ’ ಬೆಂಬಲಿಗ ಗೂಂಡಾಗಳಿಂದ ಮಾರಣಾಂತಿಕ ಹಲ್ಲೆ

0

ಕುಡ್ಲ ರ‍್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್ ಅವರನ್ನು ಧರ್ಮಸ್ಥಳದಲ್ಲಿ ಎಸ್‌ಐಟಿ ಕಾರ್ಯಾಚರಣೆಯನ್ನು ವರದಿ ಮಾಡಲು ತೆರಳಿದ್ದಾಗ ಹೆಗ್ಗಡೆ ಅವರ ಬೆಂಬಲಿಗರು ದಾಳಿ ಮಾಡಿ ಹೊಡೆದಿದ್ದಾರೆ.

ಕರ್ನಾಟಕದ ಡಿಜಿಟಲ್ ಮಾಧ್ಯಮಗಳ ವೇದಿಕೆಯಾದ ಡಿಜಿಟಲ್ ಮೀಡಿಯಾ ಫಾರ್ ಡೆಮಾಕ್ರಸಿ ಈ ಘೋರ ಕೃತ್ಯವನ್ನು ಖಂಡಿಸುತ್ತದೆ ಮತ್ತು ಅಜಯ್ ಅವರ ಮೇಲೆ ದಾಳಿ ಮಾಡಿದ ಗೂಂಡಾಗಳ ವಿರುದ್ಧ ತಕ್ಷಣದ ಕ್ರಮಕ್ಕೆ ಒತ್ತಾಯಿಸುತ್ತದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಕರ್ನಾಟಕದ ಗೌರವಾನ್ವಿತ ಹೈಕೋರ್ಟ್ ಎರಡು ಪ್ರಕರಣಗಳಲ್ಲಿ ಅಜಯ್ ಅಂಚನ್ ಅವರ ಮೇಲಿನ ನಿರ್ಬಂಧವನ್ನು ತೆಗೆದುಹಾಕಿರುವುದು ಗಮನಾರ್ಹವಾಗಿದೆ.

ಕರ್ನಾಟಕ ಸರ್ಕಾರವು ಮಾಧ್ಯಮ ಸಂಸ್ಥೆಗಳ ಮತ್ತು ಪತ್ರಕರ್ತರ ಪ್ರಜಾಪ್ರಭುತ್ವದ ಹಕ್ಕುಗಳ ಪರವಾಗಿ ನಿಲ್ಲುವುದರ ಜೊತೆಗೆ, ವಿಶೇಷವಾಗಿ ಧರ್ಮಸ್ಥಳದ ಸುತ್ತಮುತ್ತಲಿನ ಆರೋಪಿತ ಅಪರಾಧಗಳನ್ನು ಬಯಲಿಗೆಳೆಯುವಲ್ಲಿ ಮುಂಚೂಣಿಯಲ್ಲಿರುವ ಡಿಜಿಟಲ್ ಮಾಧ್ಯಮಗಳನ್ನು ಹಕ್ಕುಗಳನ್ನು ಕಾಪಾಡುವ ಹೊಣೆ ಹೊರುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಡಿಜಿಟಲ್ ಮೀಡಿಯಾ ಫಾರ್ ಡೆಮಾಕ್ರಸಿ ಹೇಳಿದೆ.

ಕರ್ನಾಟಕದ ಜನತೆ‌ ಈ ಗೂಂಡಾಗಿರಿಯನ್ನು ಖಂಡಿಸಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಪರ ನಿಲ್ಲಬೇಕೆಂದು ಮನವಿ ಮಾಡುತ್ತೇವೆ ಎಂದು ಜನತೆಗೆ ಮನವಿ ಮಾಡಿದೆ.

(ಇದೀಗ ತಿಳಿದು ಬಂದ ಮಾಹಿತಿ: ಅಜಯ್ ಅಂಚನ್ ಅವರ ಜೊತೆಗೆ, ಯುನೈಟೆಡ್‌ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್‌ನ ಕ್ಯಾಮೆರಾ ಪರ್ಸನ್ ಇಷ್ಟು ಜನರ ಮೇಲೆ ದಾಳಿ ಮಾಡಲಾಗಿದೆ. ಕ್ಯಾಮೆರಾವನ್ನು ಪುಡಿ ಮಾಡಿದ್ದಾರೆ ಮತ್ತು ಎಲ್ಲರೂ ಈ ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು ಒಬ್ಬರಿಗೆ ತೀವ್ರ ಗಾಯಗಳಾಗಿವೆ)

You cannot copy content of this page

Exit mobile version