ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪದ ಹೊರಿಸಿ ಹೋದಲ್ಲಿ ಬಂದಲ್ಲಿ ಪೆನ್ ಡ್ರೈವ್ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೈಕೋರ್ಟ್ ನ ವಕೀಲರಾದ ಅಮೃತೇಶ್ ಎಂಬುವವರು ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರದ ಮೇಲಿನ ಭ್ರಷ್ಟಾಚಾರದ ಆರೋಪದಲ್ಲಿ ಪ್ರತೀ ಬಾರಿಯೂ ಕುಮಾರಸ್ವಾಮಿ, ತನ್ನ ಬಳಿಯೂ ದಾಖಲೆಗಳಿವೆ, ಸೂಕ್ತ ಸಮಯದಲ್ಲಿ ಅದನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿಕೊಂಡು ಬಂದಿದ್ದಾರೆ. ಕೆಲವು ಖಾಸಗಿ ಚಾನಲ್ ಚರ್ಚೆಗಳಲ್ಲೂ ಸಹ ನನ್ನ ಪೆನ್ ಡ್ರೈವ್ ನಲ್ಲಿ ದಾಖಲೆ ಇರುವುದು ಸತ್ಯ ಎಂದೇ ಹೇಳಿಕೊಂಡು ಬಂದಿದ್ದಾರೆ.
ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕುಮಾರಸ್ವಾಮಿ ವಿರುದ್ಧ ವಕೀಲ ಅಮೃತೇಶ್ ಎನ್ನುವವರು ದೂರು ದಾಖಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಬಗ್ಗೆ ಆರೋಪಿಸಿ ಎಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಇದೆ ಅಂತ ಹೇಳಿಕೆ ನೀಡಿದ್ದರು. ಎಚ್ಡಿಕೆ ವಿರುದ್ಧ ಬ್ಲಾಕ್ ಮೇಲ್, ಬೆದರಿಕೆ, ಅಪರಾಧಿಕ ಸಂಚು ಸೇರಿದಂತೆ ಇತರೆ ಹಲವು ಆರೋಪದಡಿ ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿದೆ.
ಅಲ್ಲದೆ ಇದೆ ವೇಳೆ ದೂರಿನಲ್ಲಿ ಎಚ್ಡಿಕೆ ಬಳಿ ಇರುವ ಪೆನ್ ಡ್ರೈವ್ ಅನ್ನು ಸೀಜ್ ಮಾಡಿ ಅವರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸೌಧ ಪೊಲೀಸ್ ಠಾಣೆಗೆ ವಕೀಲ ಅಮೃತೇಶ್ ಎನ್ನುವರು ದೂರು ನೀಡಿದ್ದಾರೆ.