Thursday, June 20, 2024

ಸತ್ಯ | ನ್ಯಾಯ |ಧರ್ಮ

ಸಿದ್ದರಾಮಯ್ಯ ಮತ್ತು ಮಮತಾ ಬ್ಯಾನರ್ಜಿ ವಿರುದ್ಧ ನಿಂದನಾತ್ಮಕ ಪೋಸ್ಟ್‌: ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನ ವಿರುದ್ಧ FIR ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಕರ್ನಾಟಕ ಸೈಬರ್ ಕ್ರೈಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಆರೋಪಿಯನ್ನು ಈಶ್ವರಪ್ಪ ಮುನಿಯಪ್ಪ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಆರೋಪಿಯು ಪ್ರತಿಷ್ಠಿತ ವ್ಯಕ್ತಿಗಳ ಮೇಲೆ ನಿಂದನೀಯ ಮತ್ತು ಆಕ್ಷೇಪಾರ್ಹ ಪೋಸ್ಟ್‌ಗಳ ಸರಣಿಯನ್ನು ಪೋಸ್ಟ್ ಮಾಡಿದ್ದಾನೆ.

ಈತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್; ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್; RDPR, IT ಮತ್ತು BT ಸಚಿವ ಪ್ರಿಯಾಂಕ್ ಖರ್ಗೆ; ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ವಿರುದ್ಧವೂ ಆಕ್ಷೇಪಾರ್ಹ ಕಾಮೆಂಟ್ ಹಾಕಿದ್ದನು.

ಆರೋಪಿಯು ರಿಪ್ಲೈ ಮೆಸೇಜ್‌ಗಳನ್ನು ಪೋಸ್ಟ್ ಮಾಡಿದ್ದಾನೆ ಮತ್ತು ಸಿಎಂ ಸಿದ್ದರಾಮಯ್ಯ, ಶಿವಕುಮಾರ್ ಮಾಡಿದ ಪೋಸ್ಟ್‌ಗಳನ್ನು ಹಂಚಿಕೊಂಡು ಅವರ ಕುರಿತು ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವೈಟ್‌ಫೀಲ್ಡ್ ಸೈಬರ್ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಮ್ (ಸಿಇಎನ್) ಪೊಲೀಸ್ ಠಾಣೆ ಪೊಲೀಸರು ಆತನ ವಿರುದ್ಧ ದೂರು ದಾಖಲಿಸಿಕೊಂಡು ಹುಡುಕಾಟ ನಡೆಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು