Friday, June 14, 2024

ಸತ್ಯ | ನ್ಯಾಯ |ಧರ್ಮ

ಯುವತಿಯ ಕುರಿತು ಆಕ್ಷೇಪಾರ್ಹ ಕಮೆಂಟ್‌, ಕರೆ ಮಾಡಿ ಬೆದರಿಕೆ: ಪೋಸ್ಟ್‌ಕಾರ್ಡ್‌ ಕುಖ್ಯಾತಿಯ ಮಹೇಶ್‌ ವಿಕ್ರಮ್‌ ಹೆಗ್ಡೆ ವಿರುದ್ಧ FIR

ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರೊಬ್ಬರಿಗೆ ಬೆದರಿಕೆಯೊಡ್ಡುವ ಹಾಗೂ ಮಾನಹಾನಿಕರ ಕಮೆಂಟ್‌ ಮಾಡಿದ್ದಕ್ಕಾಗಿ, ಸದಾ ಸಮಾಜದ ಸಮುದಾಯಗಳ ನಡುವೆ ತಂದಿಕ್ಕಿ ತಮಾಷೆ ನೋಡುವ ಪೋಸ್ಟ್‌ ಕಾರ್ಡ್‌ ಪೇಜ್‌ ಮಾಲಿಕ ಮಹೇಶ್‌ ವಿಕ್ರಮ್‌ ಹೆಗ್ಡೆ ವಿರುದ್ಧ FIR ದಾಖಲಾಗಿದೆ.

ಈ ಕುರಿತು ಬೆಂಗಳೂರಿನ ಜೀವನ ಭೀಮಾನಗರ ಪೊಲೀಸ್‌ ಠಾಣೆಯಲ್ಲಿ ಸುರೇಶ್‌ ಬಾಬು ಎನ್ನುವವರು ದಾಖಲಿಸಿದ ದೂರಿನ ಮೇರೆಗೆ FIR ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ದೂರುದಾರರಿಗೆ ಕರೆ ಮಾಡಿರುವ ಮಹೇಶ್ ವಿಕ್ರಮ್ ಹೆಗಡೆ, ನಾವು ಸೌಜನ್ಯಳನ್ನೇ ಬಿಟ್ಟಿಲ್ಲ. ಅಂತಹ ಕಟೀಲ್ ಕೈಯಲ್ಲೂ ಏನೂ ಮಾಡಲು ಆಗಿಲ್ಲ. ಇನ್ನು ನೀನು ಏನ್ ಕಿತ್ಕೊಳ್ತಿಯಾ? ಎಂದು ಬೆದರಿಕೆ ಹಾಕಿದ್ದಲ್ಲದೇ, ಕೇಂದ್ರ ಸರ್ಕಾರ ನಮ್ಮ ಕೈಯಲ್ಲಿದೆ ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ ಎಂಬ ರೀತಿ ದೂರುದಾರರಿಗೆ ಬೆದರಿಕೆಯೊಡ್ಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಈ ಕುರಿತು ತನಿಖೆ ಮುಂದುವರೆಸಿದ್ದು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

Related Articles

ಇತ್ತೀಚಿನ ಸುದ್ದಿಗಳು