Home ರಾಜ್ಯ ಬೆಳಗಾವಿ ಸಹಕಾರಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ: ಶಾಸಕ ಲಕ್ಷ್ಮಣ ಸವದಿ ಮತ್ತು ಪುತ್ರನ...

ಸಹಕಾರಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ: ಶಾಸಕ ಲಕ್ಷ್ಮಣ ಸವದಿ ಮತ್ತು ಪುತ್ರನ ವಿರುದ್ಧ ಎಫ್‌ಐಆರ್

0

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ, ಅವರ ಪುತ್ರ ಚಿದಾನಂದ ಸವದಿ ಮತ್ತು ಅವರ ಬೆಂಬಲಿಗರ ವಿರುದ್ಧ ಅಥಣಿ ಪೊಲೀಸರು ಭಾನುವಾರ ತಡರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗಪ್ಪ ಕರೆಣ್ಣವರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಇವರ ಮೇಲಿದೆ.

ದೂರಿನ ಪ್ರಕಾರ, ನಿಂಗಪ್ಪ ಕರೆಣ್ಣವರ್ ಅವರು ಶನಿವಾರ ಸಂಘದ ಕೆಲಸಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಲಕ್ಷ್ಮಣ ಸವದಿ ಅವರ ನಿವಾಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಶಾಸಕ ಸವದಿ ಅವರು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೆನ್ನೆಗೆ ಹೊಡೆದಿದ್ದಾರೆ ಎಂದು ನಿಂಗಪ್ಪ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬಳಿಕ ಶಾಸಕರ ಪುತ್ರ ಚಿದಾನಂದ ಮತ್ತು ಅವರ ಬೆಂಬಲಿಗರು ತಮ್ಮ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದು, ಇದರಿಂದ ಗಂಭೀರ ಗಾಯಗಳಾಗಿವೆ ಎಂದು ಅವರು ಆರೋಪಿಸಿದ್ದಾರೆ. ಸದ್ಯ ಅಥಣಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

You cannot copy content of this page

Exit mobile version