Home ಬ್ರೇಕಿಂಗ್ ಸುದ್ದಿ Sanatan Dharma remark: ಉದಯನಿಧಿ ಸ್ಟಾಲಿನ್ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ FIR

Sanatan Dharma remark: ಉದಯನಿಧಿ ಸ್ಟಾಲಿನ್ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ FIR

0

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ (udayanithi stalin) ಅವರು ‘ಸನಾತನ ಧರ್ಮ’ ಕುರಿತು ಹೇಳಿಕೆ ನೀಡಿರುವುದು ದೇಶಾದ್ಯಂತ ಬಲಪಂತೀಯರ ನಡುವೆ ತಲ್ಲಣ ಹುಟ್ಟಿಸಿದೆ.

ಅದರಲ್ಲೂ ಬಿಜೆಪಿ ಡಿಎಂಕೆ ಪಕ್ಷವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಉದಯನಿಧಿ ಕ್ಷಮೆಯಾಚಿಸಬೇಕು ಎಂದು ಅದು ಆಗ್ರಹಿಸುತ್ತಿದೆ. ಆದರೆ ಅವರು ಅದಕ್ಕೆ ಸೊಪ್ಪು ಹಾಕೆ ತನ್ನ ಮಾತಿಗೆ ಬದ್ಧರಾಗಿ ನಿಂತಿದ್ದಾರೆ.

ಇಂಡಿಯಾ (INDIA) ಮೈತ್ರಿಕೂಟದಲ್ಲಿ ಡಿಎಂಕೆ (DMK) ಪಕ್ಷವು ಪಾಲುದಾರನಾಗಿದ್ದು, ಇಂಡಿಯಾ ಮೈತ್ರಿಕೂಟವು ಹಿಂದೂ ಧರ್ಮವನ್ನು ದ್ವೇಷಿಸುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಏತನ್ಮಧ್ಯೆ, ಈ ಕಾಮೆಂಟ್‌ಗಳ ಬಗ್ಗೆ ಇಂಡಿಯಾ ಮೈತ್ರಿಕೂಟ ಮೌನವಾಗಿದ್ದರೆ, ಎಲ್ಲ ಧರ್ಮಗಳನ್ನು ಗೌರವಿಸಬೇಕು ಎಂದು ಕಾಂಗ್ರೆಸ್ ಹೇಳಿದೆ.‌

ಸನಾತನ ಧರ್ಮದ ವಿವಾದ: ಉದಯನಿಧಿ ಬೆನ್ನಿಗೆ ನಿಂತ ನಿರ್ದೇಶಕ ಪಾ ರಂಜಿತ್

ಈ ಮಧ್ಯೆ, ಉದಯನಿಧಿ ಅವರ ಕಾಮೆಂಟ್‌ಗಳ ಬಗ್ಗೆ ಹಲವೆಡೆಗಳಿಂದ ದೂರುಗಳು ಬರುತ್ತಿವೆ. ಈಗ ಹೊಸದಾಗಿ, ಉದಯನಿಧಿ ಸ್ಟಾಲಿನ್ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಎಫ್‌ಐಆರ್ ದಾಖಲಿಸಲಾಗಿದೆ.

ಮಂಗಳವಾರ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 295 ಎ (ಉದ್ದೇಶಪೂರ್ವಕ ಮತ್ತು ದ್ವೇಷಪೂರಿತ ಕೃತ್ಯಗಳು) ಮತ್ತು 153 ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಕೀಲರಾದ ಹರ್ಷಗುಪ್ತ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಇಬ್ಬರ ವಿರುದ್ಧ ಪಿಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ | ಸನಾತನ ಧರ್ಮವೋ..? ಸಾಮಾಜಿಕ ನ್ಯಾಯವೋ..?

You cannot copy content of this page

Exit mobile version