Home ಬ್ರೇಕಿಂಗ್ ಸುದ್ದಿ ಧಾರ್ಮಿಕ ದ್ವೇಷವನ್ನು ಉತ್ತೇಜಿಸಿದ ಆರೋಪ: ಅಣ್ಣಾಮಲೈ ವಿರುದ್ಧ ಎಫ್‌ಐಆರ್

ಧಾರ್ಮಿಕ ದ್ವೇಷವನ್ನು ಉತ್ತೇಜಿಸಿದ ಆರೋಪ: ಅಣ್ಣಾಮಲೈ ವಿರುದ್ಧ ಎಫ್‌ಐಆರ್

0

ತಮಿಳುನಾಡು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಕೆ.ಅಣ್ಣಾಮಲೈ ವಿರುದ್ಧ ತಮಿಳುನಾಡಿನ ಧರ್ಮಪುರಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಗುರುವಾರ, ಜನವರಿ 11ರಂದು ವರದಿಯಾಗಿದೆ. ಬಿಜೆಪಿ ನಾಯಕ ಅಣ್ಣಾಮಲೈ ಅವರ ಮೇಲೆ ಎರಡು ಗುಂಪುಗಳ ನಡುವೆ ಧಾರ್ಮಿಕ ದ್ವೇಷವನ್ನು ಉತ್ತೇಜಿಸಿದ ಆರೋಪ ಹೊರಿಸಲಾಗಿದೆ.

ಎರಡು ಗುಂಪುಗಳ ನಡುವೆ ಧಾರ್ಮಿಕ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಧರ್ಮಪುರಿ ಪೊಲೀಸರು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಧರ್ಮಪುರಿ ಜಿಲ್ಲೆಯ ಬೊಮ್ಮಿಡಿ ಪೊಲೀಸ್ ಠಾಣೆಯಲ್ಲಿ ಕಲಂ 153 (ಎ), 504, 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜನವರಿ 8ರಂದು ಪಾಪ್ಪಿರೆಡ್ಡಿಪಟ್ಟಿ ಬಳಿಯ ಬೊಮ್ಮಿಡಿಯ ಸೇಂಟ್ ಲೂರ್ಡ್ಸ್ ಚರ್ಚ್‌ನ ಹೊರಗೆ ಎನ್ ಮಣ್ ಎನ್ ಮಕ್ಕಳ್ ಸಭೆಯಲ್ಲಿ ಚರ್ಚ್‌ಗೆ ಪ್ರವೇಶಿಸದಂತೆ ಆಕ್ಷೇಪಿಸಿದ ಕ್ರಿಶ್ಚಿಯನ್ ಯುವಕರ ಗುಂಪಿನೊಂದಿಗೆ ಕೆ ಅಣ್ಣಾಮಲೈ ನಡೆಸಿದ ವಾಗ್ವಾದಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದೆ.

You cannot copy content of this page

Exit mobile version