Saturday, June 21, 2025

ಸತ್ಯ | ನ್ಯಾಯ |ಧರ್ಮ

ಬೆಂಗಳೂರಿನ ಚಪ್ಪಲಿ ಗೋದಾಮಿನಲ್ಲಿ ಬೆಂಕಿ ಅವಘಡ, 5 ಕೋಟಿಗೂ ಮೀರಿ ನಷ್ಟ

ಬೆಂಗಳೂರು: ಬೆಂಗಳೂರಿನಲ್ಲಿ ಚಪ್ಪಲಿ ಮತ್ತು ಶೂಗಳನ್ನು ಸಂಗ್ರಹಿಸಿ ಇಟ್ಟಿದ್ದ ಗೋದಾಮು ಬೆಂಕಿಗೆ ಆಹುತಿಯಾಗಿದ್ದು, 5 ಕೋಟಿ ರೂಪಾಯಿಗಳಿಗೂ ಮಿಕ್ಕಿ ನಷ್ಟವಾಗಿ ಎಂದು ಅಂದಾಜಿಸಲಾಗಿದೆ.

ಬೆಂಗಳೂರಿನ ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಚಾಲಕನೊಬ್ಬನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ.

ಕ್ಯಾಂಟರ್‌ ಚಾಲಕನೊಬ್ಬ ತನ್ನ ವಾಹನವನ್ನು ನಿರ್ಲಕ್ಷ್ಯದಿಂದ ಚಲಾಯಿಸಿ ಬಳಿಯಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಟ್ಟಡಕ್ಕೆ ಸಂಪರ್ಕವಿದ್ದ ವಯರ್‌ನಲ್ಲಿ ಸಂಭವಿಸಿದ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿದೆ.

ಬಹುತೇಕ ಬೆಂಗಳೂರಿನ ಎಲ್ಲಾ ಭಾಗಗಳಿಗೂ ಇಲ್ಲಿಂದಲೇ ಶೂ ಮತ್ತು ಚಪ್ಪಲಿ ಸರಬರಾಜು ನಡೆಯುತ್ತಿತ್ತು. ಬೆಂಗಳೂರಿನ ಉತ್ತರಹಳ್ಳಿ ನಿವಾಸಿ ಶ್ರೀನಿವಾಸ್‌ ಎಂಬುವವರಿಗೆ ಸೇರಿದ್ದ ಎನ್ನಲಾದ ಈ ಗೋಡೌನ್‌ ಪೂರ್ತಿಯಾಗಿ ಸುಟ್ಟು ಹೋಗಿದೆ ಎನ್ನಲಾಗಿದೆ.

ಅದೃಷ್ಟವಶಾತ್‌ ಇದುವರೆಗೆ ಯಾವುದೇ ರೀತಿಯ ಪ್ರಾಣಹಾನಿ ವರದಿಯಾಗದಿರುವುದು ಸಮಾಧಾನಕರ ಸಂಗತಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page