Sunday, June 22, 2025

ಸತ್ಯ | ನ್ಯಾಯ |ಧರ್ಮ

ಕೋಮು ಸಂಘರ್ಷ ತಡೆಯಲು ಪ್ರಥಮ ಹೆಜ್ಜೆ; ಅಡ್ಡಿಪಡಿಸಿದರೆ ಮುಲಾಜಿಲ್ಲದೆ ಕ್ರಮ: ದಕ್ಷಿಣ ಕನ್ನಡ ಎಸ್ಪಿ ಕೆ ಅರುಣ್

ಕಳೆದ ಹತ್ತು ವರ್ಷಗಳ ಈಚೆಗೆ ನಡೆದಿರುವ ಕೋಮು ಸಂಬಂಧಿತ ಹತ್ಯೆಗಳ ಬಗ್ಗೆ ಅವಲೋಕಿಸಿದಾಗ ಆರೋಪಿಗಳು ಕೋಮುವಾದಿ ಸಂಘಟನೆಗಳ ಸಂಪರ್ಕದಲ್ಲಿ ಇರುವುದು ಕಂಡುಬಂದಿದೆ. ಈ ಸಂಬಂಧ ಆರೋಪಿಗಳು ಮತ್ತು ಘಟನೆಗೆ ಸಂಬಂಧಿಸಿದವರ ದೈನಂದಿನ ಚಟುವಟಿಕೆ ಬಗ್ಗೆ ಗಮನವಿಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ಹಂತದಲ್ಲಿ ನಮ್ಮ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿ ಕೆ ಅರುಣ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡುಬ ಪೊಲೀಸ್ ಠಾಣೆಯಲ್ಲಿ ನಡೆದ ಪ್ರತಿಭಟನೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಕೆ ಅರುಣ್, ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದೆ. ವಿಶೇಷವಾಗಿ ಕೋಮು ಸಂಘರ್ಷದ ಹಿನ್ನೆಲೆಯಲ್ಲಿ ಹೆಚ್ಚು ಗುಂಪು ಹಲ್ಲೆ, ಹತ್ಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಕೋಮು ಸಂಬಂಧಿತ ಗಲಭೆಗಳಲ್ಲಿ ಭಾಗಿಯಾಗುವವರ ದೈನಂದಿನ ಚಟುವಟಿಕೆಗಳು, ಅವರು ಎಲ್ಲಿರುತ್ತಾರೆ, ಅವರ ಚಲನವಲನಗಳೇನು ಎಂಬುದಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೆಲವರು ಕಡಬ ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪು ಸೇರಿ ಪ್ರತಿಭಟನೆ ಮಾಡಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಕಡಬ ಠಾಣೆ ಮುಂದೆ ಪ್ರತಿಭಟನೆ ನಡೆಸಿದವರು ಅವರ ಕುಟುಂಬ ಸದಸ್ಯರನ್ನೂ ಕರೆತಂದು ಪ್ರತಿಭಟಿಸುವುದಾಗಿ ಹೇಳಿದ್ದಾರೆ. ಹಾಗೆ ಮಾಡಿದರೆ ಕುಟುಂಬ ಸದಸ್ಯರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page