Thursday, May 8, 2025

ಸತ್ಯ | ನ್ಯಾಯ |ಧರ್ಮ

ಮೇ 10 ವರಗೆ ಭಾರತದ 27 ವಿಮಾನ ನಿಲ್ದಾಣಗಳಲ್ಲಿ ವಿಮಾನ ಹಾರಾಟ ತಾತ್ಕಾಲಿಕ ರದ್ದು

ಆಪರೇಷನ್ ಸಿಂಧೂರ್ ಪರಿಣಾಮದ ನಂತರ ದೇಶದ ಮೂಲೆ ಮೂಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ದೇಶದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೂ ಪ್ರತಿದಾಳಿಯ ಕರಿನೆರಳು ಬಿದ್ದಿದೆ. ಭದ್ರತಾ ಕ್ರಮವಾಗಿ ಕೇಂದ್ರ ವಿಮಾನಯಾನ ಸಚಿವರ ಆದೇಶದಂತೆ 27 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಎಲ್ಲಾ ನಗರಗಳ ಮೇಲೆ ಪೊಲೀಸರು ಕಟ್ಟೆಚ್ಚರ ವಹಿಸುವಂತೆ ತಿಳಿಸಲಾಗಿದೆ. ವಿಮಾನ ನಿಲ್ದಾಣದಿಂದ ಒಳಹೋಗುವ ಮತ್ತು ಹೊರಬರುವ ಪ್ರತಿಯೊಬ್ಬ ಪ್ರಜೆ ಮೇಲೂ ನಿಗಾ ವಹಿಸಿದ್ದು, ಯಾವುದೇ ಸಂದರ್ಭದಲ್ಲೂ ಆಗುವ ದಾಳಿಗೆ ಮುಂಜಾಗ್ರತೆ ವಹಿಸಲಾಗುತ್ತಿದೆ.

ತೀರಾ ಸೂಕ್ಷ್ಮ ವಾಯುನೆಲೆಗಳ ಮೇಲೆ ನಿಗಾ ಇಟ್ಟಿರುವ ದೇಶದ ಭದ್ರತಾ ಇಲಾಖೆ ಈಗಾಗಲೇ 27 ವಾಯು ನೆಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಶನಿವಾರ (ಮೇ 10) ಬೆಳಿಗ್ಗೆ 5.29 ರವರೆಗೆ ಈ ವಿಮಾನ ನಿಲ್ದಾಣಗಳು ಮುಚ್ಚಲ್ಪಡುತ್ತವೆ. ಇದಲ್ಲದೆ, ಭಾರತೀಯ ವಿಮಾನಯಾನ ಸಂಸ್ಥೆಗಳು ಗುರುವಾರ (ಮೇ 08) ಒಟ್ಟು 430 ವಿಮಾನಗಳನ್ನು ರದ್ದುಗೊಳಿಸಿವೆ. ಇದು ಭಾರತದ ಒಟ್ಟು ನಿಗದಿತ ವಿಮಾನಗಳ ಶೇಕಡಾ 3 ರಷ್ಟಿದೆ. ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆದ ನಂತರ ಭಾರತ ಈ ನಿರ್ಧಾರ ತೆಗೆದುಕೊಂಡಿದೆ.

ತಾತ್ಕಾಲಿಕವಾಗಿ ಮುಚ್ಚಲಾದ ವಾಯುನೆಲೆಯ ಪಟ್ಟಿ ಈ ಕೆಳಗಿನಂತಿದೆ:
1. ಚಂಡೀಗಢ
2. ಶ್ರೀನಗರ
3. ಅಮೃತಸರ
4. ಲುಧಿಯಾನ
5. ಭುಂತರ್
6. ಕಿಶನ್‌ಗಢ
7. ಪಟಿಯಾಲ
8. ಶಿಮ್ಲಾ
9. ಗಗ್ಗಲ್
10. ಬಟಿಂಡಾ
11. ಜೈಸಲ್ಮೇರ್
12. ಜೋಧಪುರ
13. ಬಿಕಾನೇರ್
14. ಹಲ್ವಾರಾ
15. ಪಠಾಣ್‌ಕೋಟ್
16. ಲೇಹ್
17. ಜಮ್ಮು
18. ಮುಂದ್ರಾ
19. ಜಾಮ್ನಗರ
20. ರಾಜ್‌ಕೋಟ್
21. ಪೋರಬಂದರ್
22. ಕಾಂಡ್ಲಾ
23. ಕೇಶೋದ್
24. ಭುಜ್
25. ಧರ್ಮಶಾಲಾ
26. ಗ್ವಾಲಿಯರ್
27. ಹಿಂದನ್ (ಘಜಿಯಾಬಾದ್)

Related Articles

ಇತ್ತೀಚಿನ ಸುದ್ದಿಗಳು

You cannot copy content of this page