ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವಂತೆ ತೀರ್ಪು ನೀಡಿರುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪದ ಬಗ್ಗೆ ಕೊನೆಗೂ ಮೌನ ಮುರಿದ ದೀದಿ, ಇದೊಂದು ಪೂರ್ವ ಯೋಜಿತ ಪಿತೂರಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಆದರೆ ಇದು ಮುಂದಿನ ವರ್ಷ (2024) ಚುನಾವಣೆಯಲ್ಲಿ ಮಹುವಾಗೆ ಸಹಾಯ ಮಾಡುತ್ತದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಗುರುವಾರ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಮಹುವಾ ಮೊಯಿತ್ರಾ ಅವರನ್ನು ಬೆಂಬಲಿಸಿದರು.
Kolkata | West Bengal CM Mamata Banerjee says "Their (BJP) plan is to remove Mahua Moitra (from Lok Sabha). This will help her become more popular before the elections. What she used to speak inside (Parliament), now she will speak outside…" pic.twitter.com/V10seOqprj
— ANI (@ANI) November 23, 2023
ವಿವಿಧ ಪ್ರಕರಣಗಳಲ್ಲಿ ತಮ್ಮ ಪಕ್ಷದ ನಾಯಕರನ್ನು ಬಂಧಿಸಿದ ನಂತರ, ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವ ಸಾಧ್ಯತೆಯಿದೆ, ಮೊಯಿತ್ರಾ ಅವರನ್ನು ಲೋಕಸಭೆಯಿಂದ ಹೊರಹಾಕುವುದು ಬಿಜೆಪಿಯ ಯೋಜನೆ, ಆದರೆ ಈ ಪಿತೂರಿಗಳು ಮಹುವಾ ಹೆಚ್ಚು ಜನಪ್ರಿಯವಾಗಲು ಸಹಾಯ ಮಾಡುತ್ತದೆ. ಈಗ ಅವರು ಹೊರಗೆ ಮಾತನಾಡಬಲ್ಲರು. ಕೇಂದ್ರದಲ್ಲಿ ಬಿಜೆಪಿಯ ಅಂತಿಮ ದಿನಗಳು ಸಮೀಪಿಸುತ್ತಿವೆ ಎಂದ ಅವರು, ಮೋದಿಯವರ ಸರ್ಕಾರ ಕೇವಲ ಮೂರು ತಿಂಗಳು ಮಾತ್ರ ಇರುತ್ತದೆ. ಇದಲ್ಲದೆ, ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡಿರುವ ಕೇಂದ್ರ ತನಿಖಾ ಸಂಸ್ಥೆಗಳು ಚುನಾವಣೆಯ ನಂತರ ಬಿಜೆಪಿಯನ್ನು ಬೆನ್ನಟ್ಟಲಿವೆ ಎಂದು ಭವಿಷ್ಯ ನುಡಿದರು.
ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಸಾಕಷ್ಟು ವಿವಾದವನ್ನು ಸೃಷ್ಟಿಸಿತ್ತು. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ಅಧ್ಯಕ್ಷತೆಯ 15 ಸದಸ್ಯರ ನೈತಿಕ ಸಮಿತಿಯು ಮಹುವಾ ಅವರನ್ನು ಲೋಕಸಭೆಯಿಂದ ಅಮಾನತುಗೊಳಿಸುವಂತೆ ಶಿಫಾರಸು ಮಾಡಿದೆ.