Home ಬ್ರೇಕಿಂಗ್ ಸುದ್ದಿ ಜಂಟಿ ಡಿ-ನೋಟಿಫಿಕೇಷನ್ ಹಗರಣ : ವಿಚಾರಣೆಗೆ ಲೋಕಾಯುಕ್ತ ಎದುರು ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ

ಜಂಟಿ ಡಿ-ನೋಟಿಫಿಕೇಷನ್ ಹಗರಣ : ವಿಚಾರಣೆಗೆ ಲೋಕಾಯುಕ್ತ ಎದುರು ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ

0

2007 ರಿಂದ 2010 ರ ಅವಧಿಯಲ್ಲಿ ಬೆಂಗಳೂರಿನ ಗಂಗಾ ನಗರದಲ್ಲಿ ನಡೆದ ಅಕ್ರಮ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯ ನೋಟಿಸ್ ಗೆ ಉತ್ತರಿಸಲು ಇದೀಗ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಲೋಕಾಯುಕ್ತ ಕಛೇರಿಗೆ ಹಾಜರಾಗಿದ್ದಾರೆ.

ಯಡಿಯೂರಪ್ಪ ಲೋಕಾಯುಕ್ತ ಕಚೇರಿಯಲ್ಲಿ ತನಿಖಾಧಿಕಾರಿಗಳ ಎದುರು ಹಾಜರಾಗಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬೇಕರ್, ಐಜಿ ಸುಬ್ರಮಣೇಶ್ವರ ರಾವ್ ನೇತೃತ್ವದಲ್ಲಿ ತನಿಖಾಧಿಕಾರಿ ಬಸವರಾಜ್ ಮಗದುಂ ಅವರು ಯಡಿಯೂರಪ್ಪ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಗಂಗಾ ನಗರದಲ್ಲಿ 1 ಎಕರೆ 11 ಗುಂಟೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಜಂಟಿಯಾಗಿ ಡಿನೋಟಿಫಿಕೇಷನ್ ನಡೆಸಿದ್ದ ಬಗ್ಗೆ ಕೆಲವೇ ದಿನಗಳ ಹಿಂದೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಹುತೇಕ ಮರೆತೇ ಹೋಗಿದ್ದ ಪ್ರಕರಣ ಇದಾಗಿದೆ.

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೈಗೆತ್ತಿಕೊಂಡಿದ್ದ ಡಿನೋಟಿಫಿಕೇಷನ್ ಪ್ರಕ್ರಿಯೆಯನ್ನು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮುಕ್ತಾಯಗೊಳಿಸಲಾಗಿತ್ತು. ಅಕ್ರಮವಾಗಿ ಡಿ-ನೋಟಿಫೈ ಮಾಡಿಸಿದ್ದ ಆರೋಪದಲ್ಲಿ ಯಡಿಯೂರಪ್ಪ ಎ 1 ಆರೋಪಿಯಾಗಿದ್ದಾರೆ.

2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್‌ ಅವರಿಂದ ನಿಯಮ 164ರ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

You cannot copy content of this page

Exit mobile version