ಬೆಂಗಳೂರು : ಬೆಂಗಳೂರು ಹಾಲು ಒಕ್ಕೂಟದ (BAMUL) ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಆಯ್ಕೆಯಾಗಿದ್ದಾರೆ.
ಇಂದು ಬೆಂಗಳೂರು ಹಾಲು ಒಕ್ಕೂಟದ ಚುನಾವಣೆ ನಡೆದಿದ್ದು, ಈ ಚುನಾವಣೆಯಲ್ಲಿ ಡಿಕೆ ಸುರೇಶ್ ಅವರು ಜಯಗಳಿಸಿ ಬಮುಲ್ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದಂತ ಅವರು, ರೈತರು, ಸೊಸೈಟಿಯವರು ನನ್ನ ಮೇಲೆ ನಂಬಿಕೆ ಇಟ್ಟು ನನ್ನನ್ನು ಬಮುಲ್ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಆ ಭರವಸೆಯನ್ನು ಉಳಿಸಿಕೊಳ್ಳುತ್ತೇನೆ. ಅಧ್ಯಕ್ಷನಾಗಿ ರೈತರಿಗೆ ಎಲ್ಲಾ ಅನುಕೂಲವಾಗುವಂತಹ ಕೆಲಸ ಮಾಡಿಕೊಡುವುದಾಗಿ ಅವರು ಭರವಸೆ ನೀಡಿದ್ದಾರೆ.