ವಿಜಯಪುರ, ಏಪ್ರಿಲ್ 13 ಕರ್ನಾಟಕದ ವಿಜಯಪುರ ಜಿಲ್ಲೆಯ ಅರ್ಜುಣಗಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು 32 ವರ್ಷದ ಅರ್ಜುನ್ ಕುಶಾಲ್ ಸಿಂಗ್ ರಜಪೂತ್, 52 ವರ್ಷದ ರವಿನಾಥ್ ಪತ್ತಾರ್, 40 ವರ್ಷದ ಪುಷ್ಪಾ ರವಿನಾಥ್ ಪತ್ತಾರ್ ಮತ್ತು 12 ವರ್ಷದ ಮೇಘರಾಜ ರಜಪೂತ್ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಅವರ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯ ನಂತರ ಈ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ವಿಜಯಪುರ ನಗರದಿಂದ ಜಮಖಂಡಿ ಪಟ್ಟಣದ ದೇವಸ್ಥಾನಕ್ಕೆ ತೆರಳುತ್ತಿದ್ದರು.
ಸಿಮೆಂಟ್ ಹೊತ್ತ ಲಾರಿ ಜಮಖಂಡಿ ಕಡೆಯಿಂದ ವಿಜಯಪುರ ಕಡೆಗೆ ಬರುತ್ತಿತ್ತು. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.
ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಪಘಾತದ ನಂತರ ಕಾರು ಜಖಂಗೊಂಡ ಸ್ಥಳಕ್ಕೆ ವಿಜಯಪುರ ಎಸ್ಪಿ ಋಷಿಕೇಶ ಸೋನಾವಾನೆ ಭಗವಾನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.