ಬೆಂಗಳೂರು: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡ (ಎಸ್ಐ) ಮಹಿಳೆಯೊಬ್ಬರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ನಾಲ್ವರನ್ನು ಬಂಧಿಸಿದೆ ಎಂದು ಎಸ್ಐಟಿ ಮೂಲಗಳು ಗುರುವಾರ ತಿಳಿಸಿವೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ತಂದೆ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಈಗಾಗಲೇ ಬಂಧಿಸಿದೆ.
ಪ್ರಜ್ವಲ್ ಅವರು ನೀಡಿದ್ದ ಗಡುವು ಮಂಗಳವಾರಕ್ಕೆ ಮುಗಿಯುತ್ತಿದ್ದಂತೆ ಪ್ರಜ್ವಲ್ ವಾಪಸಾಗುವ ಲಕ್ಷಣ ಕಾಣುತ್ತಿಲ್ಲ, ರೇವಣ್ಣ ಅವರ ಆಪ್ತ ಸತೀಶ್ ಬಾಬಣ್ಣನನ್ನೂ ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾನೆ.
ಮೂರನೇ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದರು, ಆದರೆ ತನಿಖಾ ವಿಷಯಗಳನ್ನು ಉಲ್ಲೇಖಿಸಿ ಅವರ ಗುರುತನ್ನು ಬಹಿರಂಗಪಡಿಸಲು ನಿರಾಕರಿಸಿದರು.
ಮೂರು ಮಕ್ಕಳ ತಾಯಿಯಾಗಿರುವ ಮಹಿಳೆಯನ್ನು ಆಕೆಯ ಮನೆಯಿಂದ ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟ ಆರೋಪದಲ್ಲಿ ರೇವಣ್ಣ ಮತ್ತು ಬಾಬಣ್ಣ ಅವರನ್ನು ಮೊದಲು ಬಂಧಿಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಹಿಳೆಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಂಧಿತ ನಾಲ್ವರೂ ಮೈಸೂರಿನ ಕೃಷ್ಣರಾಜನಗರದವರು.