Home ಬ್ರೇಕಿಂಗ್ ಸುದ್ದಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-11

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-11

0

ಯೋಜನೆ ಮತ್ತು ಪ್ರದೇಶಾಭಿವೃದ್ಧಿ

  • ರಾಜ್ಯದ ಜಿ.ಎಸ್.ಡಿ.ಪಿ ಬೆಳವಣಿಗೆ ದರವನ್ನು ಶೇ.13 ರಿಂದ ಶೇ.17ಕ್ಕೆ ಹೆಚ್ಚಿಸುವ ಮೂಲಕ ರಾಜ್ಯವನ್ನು 1 ಟ್ರಿಲಿಯನ್ ಡಾಲರ್‌ ಎಕಾನಮಿಯಾಗಿ ಏರಿಸುವ (1 Trillion Dollar Economy) ಗುರಿಯೊಂದಿಗೆ ಕೃಷಿ, ಉದ್ಯಮ ಮತ್ತು ಸೇವಾ ವಲಯಗಳ ಸಾಮರ್ಥ್ಯ ವೃದ್ಧಿ, ಮೂಲಸೌಕರ್ಯ ಬೆಂಬಲ, ಅಧಿಕಾರ ಪ್ರತ್ಯಾಯೋಜನೆ, ಆಡಳಿತ ವಿಕೇಂದ್ರೀಕರಣ ಮತ್ತಿತರ ಉಪಕ್ರಮಗಳನ್ನು ಜಾರಿಗೆ ತರಲಾಗುವುದು.
  • ಯು.ಪಿ.ಎ. ಸರ್ಕಾರದ ಇಚ್ಛಾಶಕ್ತಿಯಿಂದ ಭಾರತದ ಸಂವಿಧಾನಕ್ಕೆ ತಿದ್ದುಪಡಿ ಮಾಡಿ, ಅನುಚ್ಛೇದ 371 (ಜೆ) ಅಳವಡಿಸುವ ಮೂಲಕ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲಾಗಿದೆ.
    ಈ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರತ್ಯೇಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಯಿತು. ಆದರೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಪ್ರಮಾಣದ ಅನುದಾನ ಘೋಷಿಸಿದ್ದರೂ, ಸಮರ್ಪಕವಾದ ಕ್ರಿಯಾ ಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಲ್ಲಿ ಅವರ ವೈಫಲ್ಯ ಎದ್ದು ಕಾಣುತ್ತದೆ. ಇದರ ಪರಿಣಾಮವಾಗಿ ಮಂಡಳಿಯಲ್ಲಿ
    2,000 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಅನುದಾನ ಬಳಕೆಯಾಗದೆ ಉಳಿದಿರುವುದನ್ನು ಗಮನಿಸಲಾಗಿದೆ. ಈ ಎಲ್ಲಾ ನ್ಯೂನತೆಗಳನ್ನು ಸರಿಪಡಿಸಿ, ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ 2023-24ನೇ ಸಾಲಿನಲ್ಲಿ 5,000 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
  • ರಾಜ್ಯದ ಸರಾಸರಿಗಿಂತ ಕಡಿಮೆ ಪ್ರಗತಿ ಸಾಧಿಸುತ್ತಿರುವ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಶಿಕ್ಷಣ, ಆರೋಗ್ಯ, ಪೌಷ್ಟಿಕತೆ, ಲಿಂಗ ಸಮಾನತೆ, ಬಡತನ ನಿರ್ಮೂಲನೆ ಮತ್ತಿತರ ಅಭಿವೃದ್ಧಿಯ
    ಬಹು ಆಯಾಮ ಸೂಚ್ಯಂಕಗಳಲ್ಲಿ ಸುಧಾರಣೆ ತರಲು 3,000 ಕೋಟಿ ರೂ. ವೆಚ್ಚ ಮಾಡಲಾಗುವುದು.
  • 2023-24ನೇ ಸಾಲಿನಲ್ಲಿ ನಗರಾಭಿವೃದ್ಧಿ ಇಲಾಖೆಯ ನಿಗಮಗಳ ವತಿಯಿಂದ ಗ್ರೀನ್‌ ಬಾಂಡ್‌ಗಳ ಮೂಲಕ ಸುಮಾರು 1,000 ಕೋಟಿ ರೂ. ಬಂಡವಾಳ ಸಂಗ್ರಹಿಸಿ, ಸ್ವಚ್ಛ ಮತ್ತು ಸುಸ್ಥಿರ ನಗರಗಳನ್ನು ವೇಗವಾಗಿ ನಿರ್ಮಾಣ ಮಾಡಲಾಗುವುದು.

You cannot copy content of this page

Exit mobile version