Monday, June 9, 2025

ಸತ್ಯ | ನ್ಯಾಯ |ಧರ್ಮ

ಲೋಕಸಭೆಯ ಕಾಂಗ್ರೆಸ್ ಉಪನಾಯಕನಾಗಿ ಗೌರವ್ ಗೊಗೊಯ್

ಹೊಸದೆಹಲಿ: ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಅವರನ್ನು ಲೋಕಸಭೆಯ ಉಪನಾಯಕರನ್ನಾಗಿ ಪಕ್ಷ ನೇಮಿಸಿದೆ. ಈ ನಿರ್ಧಾರದ ಕುರಿತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಪತ್ರ ಕಳುಹಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಲೋಕಸಭೆಗೆ ಕಾಂಗ್ರೆಸ್ ಉಪನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ಸಚೇತಕರನ್ನು ನೇಮಕ ಮಾಡಿದ್ದಾರೆ. ಈ ಸಂಬಂಧ ಸೋನಿಯಾ ಗಾಂಧಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಕಳುಹಿಸಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಕೇರಳದಿಂದ ಎಂಟು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಕೋಡಿಕುನ್ನಿಲ್ ಸುರೇಶ್ ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ. ವಿರುದುನಗರ ಸಂಸದ ಮಾಣಿಕಂ ಟ್ಯಾಗೋರ್ ಮತ್ತು ಕಿಶನ್‌ಗಂಜ್ ಸಂಸದ ಮೊಹಮ್ಮದ್ ಜಾವೇದ್ ಲೋಕಸಭೆಯಲ್ಲಿ ಪಕ್ಷದ ಸಚೇತಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿ ಪಕ್ಷಗಳು ಜನರ ಸಮಸ್ಯೆಗಳ ವಿರುದ್ಧ ತೀವ್ರ ಹೋರಾಟ ನಡೆಸಲಿವೆ ಎಂದು ವೇಣುಗೋಪಾಲ್ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page